8:12 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು