2:11 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ

04/01/2022, 16:06

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು.

23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆಯುರ್ವೇದ ಕಾಲೇಜು ತಲಪಾಡಿ. ಇವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


24-12- 21ರಂದು ಕೋವಿಡ್ ಮುಂಜಾಗ್ರತ ಎಚ್ಚರಿಕೆ ಹಾಗೂ ಕ್ರಮಗಳ ಬಗ್ಗೆ ಸಮೀಕ್ಷೆ ಮೂಲಕ ಜನ ಜಾಗೃತಿಯನ್ನು ಗ್ರಾಮದ ಜನರಿಗೆ ನೀಡಿದರು.
27-12-21ರಂದು ಶ್ರೀಮತಿ ಅರುಣಾ ಕಣ್ಣನ್ ದೈಹಿಕ ಶಿಕ್ಷಕರು ಶಾರದಾ ವಿದ್ಯಾನಿಕೇತನ ತಲಪಾಡಿ. ಇವರು ವಿದ್ಯಾರ್ಥಿಗಳಲ್ಲಿ ಸ್ವಯಂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.


28-12-21ರಂದು ಡಾ.ಸ್ವಪ್ನ ಡಿ. ಸಂಹಿತ ಸಿದ್ಧಾಂತ, ಶಾರದಾ ಆಯುರ್ವೇದ ಕಾಲೇಜು ಇವರು. ಸಮತೋಲನ ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು. ಹಾಗೂ 7 ದಿನಗಳ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಕಾಲೇಜಿನ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಕೈತೋಟ ನಿರ್ಮಾಣ, ಹಾಗೂ ಉಪಹಾರಗೃಹದಲ್ಲಿ ಚಿತ್ರಕಲೆಯ ಮೂಲಕ ಸ್ವಚ್ಛತ ಅಭಿಯಾನದ ಬರಹವನ್ನು ಬರೆದರು.


31-12-21ರಂದು ಮಂಜುನಾಥ್ ಮಲೆನಾಡು ಕಲೆ ಮತ್ತು ಕರಕುಶಲ ವಿಭಾಗ ಶಾರದ ವಿದ್ಯಾನಿಕೇತನ ತಲಪಾಡಿ. ಇವರು ಪೌರಾಣಿಕ ಕಥಾ ಭಾಗದ ತುಣುಕನ್ನು ಅಭಿನಯಿಸಿ ತೋರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಶ್ರೀ ಸತ್ಯಜಿತ್ ಫಸ್ಟ್ ನ್ಯೂರೋ ಆಸ್ಪತ್ರೆ ಇವರು ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಡಾ.ಮೀನಾ ಜೆ ಪಣಿಕ್ಕರ್ ಇವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸೂರಾಜ್ ಎಂ ದೇವಾಡಿಗ, ಅಮಿತ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರವಣ್ ಆಚಾರ್ಯ, ಮತ್ತು ದಿಶಾ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು