4:33 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು