11:55 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ

10/01/2022, 13:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾವೇರಿ ನಗರದಲ್ಲಿ ಭಾನುವಾರ ರಾತ್ರಿ 11 ಗಂಟೆ ಈ ದುರ್ಘಟನೆ ನಡೆದಿದೆ. ಮೂಲತಃ ವಿಜಯ ನಗರ ಜಿಲ್ಲೆ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಮೂರ್ತಿ ನಾಯ್ಕ ಸ್ಥಳದಲ್ಲಿಯೇ ಮೂರ್ತಿ ನಾಯ್ಕ್ (38)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಹಾವೇರಿ ಜಿಲ್ಲೆ ಸಾಂಗೂರ್ ಶುಗರ್ ಫ್ಯಾಕ್ಟರಿಗೆ ಕಟಾವು ಮಾಡಿದ್ದ ಕಬ್ಬನ್ನು, ಎತ್ತಿನಗಾಡಿಯಲ್ಲಿ ತೆಗೆದು ಕೊಂಡುಹೋಗಿದ್ದಾರೆ. ರಾತ್ರಿ 11ಗಂಟೆಗೆ ಹೊತ್ತಲ್ಲಿ ಲಾರಿ ಬಂಡಿ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಪರಿಣಾಮ ಎತ್ತಿನ ಗಾಡಿ ಸಂಪೂರ್ಣ ಜಖಂಗೊಂಡಿದ್ದು  ಸ್ಥಳದಲ್ಲೇ ಮೂರ್ತಿ ನಾಯ್ಕ್ ಮೃತಪಟ್ಟಿದ್ದಾರೆ. 2 ಎತ್ತುಗಳು ಕೂಡ ಮೃತ ಸ್ಥಳದಲ್ಲಿಯೇ ಸಾವನ್ನಪ್ಪಿವೆ.ಎತ್ತಿನ ಗಾಡಿಯಲ್ಲಿದ್ದ ಮೃತನ ಚಿಕ್ಕಪ್ಪ ಅರ್ಜುನ ನಾಯ್ಕ್ (55)ರವರಿಗೆ ಕಾಲು ಮುರಿದಿದೆ, ಅವರ ಚಿಕ್ಕಪ್ಪ ನ ಮಗ ಸೀನಾನಾಯ್ಕ(18)ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಜರುಗಿದ ತಕ್ಷಣ ಅಪಘಾತ ಪಡಿಸಿದ ಲಾರಿ ಡ್ರೈವರ್ ಲಾರಿ ಸ್ಥಳದಲ್ಲಿಯೇ ಬಿಟ್ಟು ಪರಾರಿ ಯಾಗಿದ್ದಾನೆಂದು ಹೇಳಲಾಗಿದೆ, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ ಎಂದು ಮೃತರ ಸಂಬಂಧಿಗಳು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು