10:26 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ

04/06/2021, 12:19

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@mail.com

ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದರು.

ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. ರೈತರ ಸಾಲ ಕೂಡ ಮನ್ನಾ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷ ಮುಖ್ಯಮಂತ್ರಿಯಾದರೂ ರೈತರಿಗೆ ಒಂದು ಪೈಸೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಯಡಿಯೂರಪ್ಪ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ. ಕಿವಿ ಕೇಳಿಸುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲದೆ, ಅಭಿವೃದ್ಧಿಯಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಠೋಡ್ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಮೈಸೂರಿನ ಕೆಎಸ್ ಆರ್ ಮಾದರಿ ಉದ್ಯಾವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಮಾತನಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ. ನೂತನ ತಾಲೂಕು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಹೊಸ ತಾಲೂಕಿಗೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತಕ್ಷಣ ತೆಗೆದು ಕೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು