9:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ

14/01/2022, 15:10

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ.

ಮೈಸೂರು ನಗರ ಮತ್ತು ಮೈಸೂರು ತಾಲೂಕಿನಲ್ಲಿ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ.

ಜ.13 ರಿಂದ ಧಾರವಾಡ ನಗರ ಹಾಗೂ ಗ್ರಾಮೀಣ ಮತ್ತು ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ 1ರಿಂದ 8 ರ ವರೆಗಿನ ಭೌತಿಕ ತರಗತಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 1ರಿಂದ 9 ನೇ ತರಗತಿಗಳನ್ನು ಜನವರಿ 31 ರವರೆಗೆ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಜಿಲ್ಲಾಧಿಕಾರಿಗಳು ಆಯಾ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು