5:12 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

22/01/2022, 08:42

ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ

ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.

ಏನಿದು ಹಾಲಿಗೆ ರಾಸಾಯನಿಕ ಬೆರಕೆ.?: ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

ಹೇಗೆ ಬೆಳಕಿಗೆ ಬಂತು?: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು