11:19 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ: 5 ಶಾಲೆ ದತ್ತು ಸ್ವೀಕಾರ 

05/06/2021, 19:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ್  ಅವರು ಸರಕಾರಿ ಪ್ರಾಥಮಿಕ ಶಾಲೆ ಮಲ್ಲೇದೇವರಗುಡ್ಡ ದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಇರುವುದರಿಂದ ನಾವೆಲ್ಲರೂ ಜೀವಂತವಾಗಿದ್ದೇವೆ. ಪ್ರತಿಯೊಬ್ಬರು ಜನ್ಮದಿನ ಆಚರಣೆ ಮಾಡಿಕೊಳ್ಳುವಾಗ ಒಂದು ಗಿಡವಾದರೂ ನಾಟಿ ಮಾಡಿದರೆ ಜೀವನ ಪಾವನ ಎಂದು ತಿಳಿಸಿದರು. ಇಂದು ಜಗತ್ತಿಗೆ ಹರಡಿರುವ ಭಯಾನಕ ರೋಗ ಕೋವಿಡ್ ಇದನ್ನು ಮುಕ್ತ ಗಳಿಸಬೇಕಾದರೆ ಪ್ರತಿಯೊಬ್ಬರು ಗಿಡ ಗಳನ್ನು ಹಚ್ಚುವದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಚೆನ್ನಾಗಿ ಗಾಳಿ ಬರುವುದರಿಂದ ಆಮ್ಲಜನಕ ಜಾಸ್ತಿಯಾಗುತ್ತದೆ ಎಂದು ಆವರು ನುಡಿದರು. 

ಇದೇ ಸಂದರ್ಭದಲ್ಲಿ ದೇವದುರ್ಗ ತಾಲೂಕಿನಾದ್ಯಂತ ಸುಮಾರು 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲೆದೇವರಗುಡ್ಡ ಶಾಲೆ ಸೇರಿದಂತೆ ಸುಮಾರು ಐದು ಶಾಲೆಯನ್ನು ದತ್ತು ಪಡೆದು ಉನ್ನತಿ ಕರಿಸುವುದಾಗಿ ಶ್ರೀದೇವಿ ನಾಯಕ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಹಿರಿಯರು ಮತ್ತು ಯುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿ ಬಳಗದವರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ರಫಿ, ವಿಶ್ವರಾದ್ಯ ನಾಯಕ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು