11:50 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು