1:03 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್‍ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು?

27/01/2022, 23:10

ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್‍ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ್ ಇಂಧನ ಖಾಲಿಯಾಗಿ ಕಕ್ಷೆಯಲ್ಲಿ ಅಸ್ತವ್ಯಸ್ತವಾಗಿ ಸುತ್ತುತ್ತಿದೆ.

ಈಗ ನಾಲ್ಕು ಟನ್ ತೂಕದ ಸೆಕೆಂಡ್‍ಗೆ 2.58 ಕಿ.ಮೀ ವೇಗದಲ್ಲಿ ಸಂಚರಿಸುವ ರಾಕೆಟ್ ಚಂದ್ರನನ್ನು ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಖಗೋಳವಿಜ್ಞಾನಿ ಬಿಲ್ ಗ್ರೇ ಈ ರಾಕೆಟ್ ಪಥವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ. ರಾಕೆಟ್ ವೀಕ್ಷಿಸುತ್ತಿರುವ ಖಗೋಳಶಾಸ್ತ್ರಜ್ಞರು ಡೇಟಾವನ್ನು ಸಂಗ್ರಹಿಸುತ್ತಿದ್ದು, ಯಾವಾಗ ರಾಕೆಟ್ ಚಂದ್ರನಿಗೆ ಅಪ್ಪಳಿಸಬಹುದೆಂದು ಲೆಕ್ಕಾಚಾರ ಮಾಡುತ್ತಿದ್ದಾರೆ.

ಮಾರ್ಚ್ 4 ರಂದು ಈ ರಾಕೆಟ್ ಅಪ್ಪಳಿಸಬಹುದು ಎಂದು ಅಂದಾಜಿಸಲಾಗಿದ್ದರೂ ಚಂದ್ರನ ಯಾವ ಭಾಗಕ್ಕೆ ಅಪ್ಪಳಿಸಬಹುದು ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ಬಹಳ ಕಠಿಣ ವಿಚಾರ ಎಂದು ತಜ್ಞರು ತಿಳಿಸಿದ್ದಾರೆ.

ಯಾವುದೇ ಉದ್ದೇಶವಿಲ್ಲದೇ ಬಾಹ್ಯಾಕಾಶದ ಕಸವೊಂದು ಚಂದ್ರನ ಮೇಲೆ ಅಪ್ಪಳಿಸುತ್ತಿರುವುದು ಇದೇ ಮೊದಲು. ಅಪ್ಪಳಿಸಿದ ನಂತರ ಸೃಷ್ಟಿಯಾಗುವ ಕುಳಿಯ ಬಗ್ಗೆ ತಿಳಿಯುವ ವೈಜ್ಞಾನಿಕ ಕುತೂಹಲ ಹೆಚ್ಚಾಗಿದೆ ಎಂದು ಬಿಲ್ ಗ್ರೇ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು