9:45 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು