9:32 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

06/02/2022, 21:12

ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು