2:02 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು