8:03 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ

19/02/2022, 22:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporter@gmail.com

ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ್ಧವಾದ ಹಕ್ಕನ್ನು ನೀಡಬೇಕೆಂದು ಒತ್ತಾಯಿಸಿದರು. 

ಒಕ್ಕೂಟದ ಅಧ್ಯಕ್ಷ ಬಿಡಿ ಹಿರೇಮಠ ಅವರು ಮಾತನಾಡಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 19ನೇ ಕಾಲದಲ್ಲಿ ಬರುವ ಬೇಡಜಂಗಮ ಜಾತಿಯು ಈಗಾಗಲೇ ಸಂವಿಧಾನಾತ್ಮಕವಾಗಿದ್ದು, ಜಾತಿ ಸರ್ಟಿಫಿಕೇಟ್ ಕೇಳಿದರೆ ವೀರಶೈವ-ಲಿಂಗಾಯತ ಎಂದು ನೀಡುತ್ತಿರುವುದು ಅವೈಜ್ಞಾನಿಕ. ವೀರಶೈವ ಲಿಂಗಾಯತ ವು ಒಂದು ಪಂಥವಾಗಿದ್ದು ಅದು ಜಾತಿ ಆಗಿರುವುದಿಲ್ಲ ಎಂದು ಹೇಳಿದ ಅವರು ಮುಂದಿನ ಹೋರಾಟ ಬೆಂಗಳೂರಿನಲ್ಲಿ ಉಗ್ರವಾಗಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯಾಧ್ಯಕ್ಷ ದ್ವಾರಕೀಶ್ ಮಾತನಾಡಿ, ಸಮಾಜದಲ್ಲಿ ಜಂಗಮ ಸಮಾಜಕ್ಕೆ ದೊಡ್ಡ ಗೌರವ ಇದೆ.
ದಲಿತ ಸಂಘಟನೆಯ ರಾಜಾಧ್ಯಕ್ಷ ವೆಂಕಟೇಶ್ ಅವರ  ಬೆಂಬಲವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶ ಮೇರಿಗೆ ಇನ್ನು ಎರಡು ತಿಂಗಳಲ್ಲಿ ಎಲ್ಲ ಜಂಗಮರಿಗೆ ಬೇಡ ಜಂಗಮ ಪ್ರಮಾಣಪತ್ರ ಸಿಗಲಿದೆ ಎಂದು ಹೇಳಿದರು.

ಕೆಲವು ಶಾಸಕರು ಜಂಗಮರಿಗೆ ಸಿಗಬೇಕು ಪ್ರಮಾಣ ಪತ್ರಕೆ ಅಡ್ಡಿ ಮಾಡಿದರು ಎಂದರು.

ಬೃಹತ್ ಪ್ರತಿಭಟನಾ ಮೆರವಣಿಗೆ ಮುಧೋಳ ಪಟ್ಟದಿಂದ ರನ್ನ ಕ್ರೀಡಾಂಗಣಕ್ಕೆ ಬಂದು ತಲುಪಿತು. 

ರಾಜ್ಯ ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಅವರು ಮಾತನಾಡಿ, ಬೇಡ ಜಂಗಮರ ಹೋರಾಟ ನ್ಯಾಯಯುತವಾಗಿದ್ದು ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ರಾಯಚೂರು ಜಿಲ್ಲಾ ಬೇಡಜಂಗಮ ಸಮಾಜದ ಮುಖಂಡರಾದ ಆದಿ ಬಸವರಾಜ್ ಸಿಂಧನೂರು, ಸಂಪಾದಕರಾದ
ವಿರುಪಾಕ್ಷಯ್ಯ ಸಾಲಿಮಠ, ರಾಯಚೂರು ಬಸವರಾಜ್ ಹಿರೇಮಠ, ಮುಸ್ಲಿಂ ಕಾರಲಕುಂಟೆ ಮಲ್ಲಿಕಾರ್ಜುನ್ ಲಿಂಗಸ್ಗೂರು ರಮೇಶ್ ಸಿಂಗ ಪತ್ರಕರ್ತ  ಬಸವರಾಜ್ ಸಿದ್ದಲಿಂಗಯ್ಯ ಸಿದ್ದಲಿಂಗಯ್ಯ ಸ್ವಾಮಿ ಮಠ ಗಣ ಮಠದಯ್ಯ ಸ್ವಾಮಿ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು