3:44 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು