6:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು