11:45 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು