9:28 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ

05/03/2022, 10:36

ಕಾರವಾರ(reporterkarnataka.com):

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಮಾರ್ಚ್ 6ರಂದು  ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. 

ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು. “ನೂಲಿನಂತೆ ಸೀರೆ ತಾಯಿಯಂತೆ ಮಗಳು” ಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ಈ ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧು-ಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು