7:38 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

05/03/2022, 10:47

ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು ಮಣ್ಣಿನಡಿ ಸಿಲುಕಿವೆ. ಮಹೇಂದ್ರಪ್ಪ ಎನ್ನುವವರು ಈ ಸ್ಥಳದ ಮಾಲೀಕರಾಗಿದ್ದು, ಕೇರಳ ಮೂಲದ ಹಕೀಂ ಎಂಬುವವರು ಬಿಳಿ ಕಲ್ಲು ಕ್ವಾರಿ ನಡೆಸುತ್ತಿದ್ದರು ಎನ್ನಲಾಗಿದೆ.

ನಾಪತ್ತೆಯಾಗಿರುವ ಕಾರ್ಮಿಕರು ಕೊಳ್ಳೆಗಾಲ ಅಥವಾ ತಮಿಳುನಾಡು ಮೂಲದವರು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.

ಕಲ್ಲು ಗಣಿಗಾರಿಕೆಯಲ್ಲಿ 50 ಕ್ಕು ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಪಾಯಕಾರಿ ರೀತಿಯಲ್ಲಿಯೇ ಜೆಸಿಬಿ, ಇಟಾಚಿಗಳು ಕಲ್ಲು ಗಣಿಕಾರಿಕೆ ನಡೆಸುತ್ತಿದ್ದವು. ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ರಮ ಗಣಿಗಾರಿಕೆ ನಡೆಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

200ಕ್ಕೂ ಹೆಚ್ಚು ಅಡಿ ಆಳದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದ್ದು, ಮತ್ತಷ್ಟು ಮಾಹಿತಿ ಹೊರಬೀಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು