9:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ

05/03/2022, 10:52

ಮಡಿಕೇರಿ(reporterkarnataka.com):

ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ.

ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರಿ ಶೀತಲ್ ಸಂಪತ್ ಕಾರ್ವಿಕ್ ಪಟ್ಟಣದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಪದವಿ ಪಡೆಯಲು ತೆರಳಿದ್ದರು.

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭಗೊಂಡ ನಂತರ ಮರಳಿ ತವರು ನೆಲಕ್ಕೆ ಬರಲು ಯತ್ನಿಸಿದ್ದರು. ಆದರೆ ಇವರು ಸೇರಬೇಕಾಗಿದ್ದ ನೆಲೆ ಹಲವು ಸಾವಿರ ಕಿ.ಮೀ. ಇದ್ದುದರಿಂದ ಯಶಸ್ವಿಯಾಗಿರಲಿಲ್ಲ.

ಆದರೆ ಈ ಬಾರಿ ಶೀತಲ್ ಸಂಪತ್ ಕಾರ್ವಿಕ್ ಪಟ್ಟಣದಿಂದ ಅಂದಾಜು 1,300 ಕಿ ಮೀ ದೂರದ ಪೋಲೆಂಡ್ ದೇಶವನ್ನು ಬುಧವಾರ ತಲುಪಿದ್ದು, ಸದ್ಯ ಭಾರತೀಯ ದೂತಾವಾಸ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದಾರೆ.

ಪೋಲೆಂಡ್ ದೇಶದಲ್ಲಿರುವ ಭಾರತ ರಾಯಭಾರಿ ಕಚೇರಿಯು ಉಕ್ರೇನ್ ದೇಶದಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಏರ್ ಲಿಫ್ಟ್ ಆಗುವ ಆಶಾಭಾವನೆಯನ್ನು ಶೀತಲ್ ಸಂಪತ್ ವ್ಯಕ್ತಪಡಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮಕ್ಕಾಗಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧ್ಯ ಸಿಂಧ್ಯಾ ಪೋಲೆಂಡ್’ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಶೀತಲ್ ಅವರು ಭಾರತಕ್ಕೆ ಆಗಮಿಸಿದ‌ ಬಳಿಕ ಕತಾರ್’ಗೆ ತೆರಳಿ ತಂದೆಯನ್ನು ಸೇರಿಕೊಳ್ಳಲಿರುವುದಾಗಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು