10:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ 

08/03/2022, 11:42

ತೊಕ್ಕೊಟ್ಟು (reporterkarnataka.com): 

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.

ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಸೌರವ್ ತನ್ನ ತಾಯಿ ಜತೆ ಆಗಮಿಸಿದ್ದ. 

ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್‍ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು