9:32 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬೆಳಗಾವಿ: ಮುಳ್ಳೂರ ಆಯಿಲ್ ಮಿಲ್ ನಲ್ಲಿ ಭಾರಿ ಅಗ್ನಿ ದುರಂತ; 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ನಾಶ

16/03/2022, 18:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಜಿಲ್ಲೆಯ ರಾಮದುರ್ಗ ಪಟ್ಟಣದ ಗಾಂಧಿನಗರದ ವೆಂಕಟೇಶ್ ಟಾಕೀಸ್ ಹಿಂದುಗಡೆ ಇರುವ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಸ್  ಮುಳ್ಳೂರ ಆಯಿಲ್ ಮಿಲ್ ನಲ್ಲಿ ಬುಧವಾರ  ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ಸುಟ್ಟುಹೋಗಿದೆ.


ತಡರಾತ್ರಿ ಸುಮಾರು 2 ಗಂಟೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಮಿಲಗೆ ಬೆಂಕಿ ಕಾಣಿಸಿಕೊಂಡಿದೆ. ಈ ಆಯಿಲ್ ಮಿಲನಲ್ಲಿ ಶೇಂಗಾ ಎಣ್ಣೆ, ಸೂರ್ಯಪಾನ ಎಸ್ ಎಫ್  ಎಣ್ಣೆ  ತಯಾರಿ ಮಾಡಲಾಗುತ್ತಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಮಿಲಗೆ  ಬೆಂಕಿ ಹತ್ತಿ ಉರಿದಿದೆ.

ಸ್ಥಳಕ್ಕೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯನ್ನು ನಂದಿಸಲು 5 ಗಂಟೆಗಳ ಕಾಲ ಬೇಕಾಯಿತು. 

ಸುಮಾರು 18 ರಿಂದ 20 ಲಕ್ಷ ಮೌಲ್ಯದ ಶೇಂಗಾ ಹಾಗೂ ಎಣ್ಣೆ ಸುಟ್ಟು ಭಸ್ಮವಾಗಿದೆ. 

ಬೆಂಕಿ ಕಾಣಿಸಿಕೊಂಡಿದ್ದು ನೋಡಿ ಸಾರ್ವಜನಿಕರು ಮಾಲೀರಿಗೆ  ಕರೆ ಮಾಡಿ ತಿಳಿಸಿದ್ದಾರೆ. 

ಅಗ್ನಿಶಾಮಕ ದಳದ ಅಧಿಕಾರಿಗಳಾದ ಮಂಜುನಾಥ ಕಲಾದಗಿ ಮಾತನಾಡಿ, ರಾತ್ರಿ 3 ಗಂಟೆಗೆ ಆಯಿಲ್ ಮಿಲ್ ನಲ್ಲಿ ಬೆಂಕಿ ಕಾಣಿಸಿ ಕೊಂಡಿರುವ ಸುದ್ದಿ ತಿಳಿತು. ಸುದ್ದಿಯನ್ನು ಕೇಳಿದ ತಕ್ಷಣ ನಾವು ಒಂದು ವಾಹನ ತೆಗೆದುಕೊಂಡು ಸ್ಥಳಕ್ಕೆ ಹೋದೆವು. ಅಲ್ಲಿ ಬೆಂಕಿ ಅತಿ ಹೆಚ್ಚು ಇತ್ತು. ನಂತರ ನಾವು ಇನ್ನೊಂದು ನಮ್ಮ ಅಗ್ನಿ ಜಲವಾಹನ ತಂದು 2 ವಾಹನದಿಂದ ಸತತವಾಗಿ 5 ರಿಂದ 6 ಗಂಟೆ ಕಾರ್ಯಾಚರಣೆ ನಡೆಸಿ 6 ರಿಂದ 8 ಸಲಾ ನೀರನ್ನು ತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದೇವೆ ಎಂದು ಹೇಳಿದರು. 


ಶ್ರೀ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಜ್  ಮುಳ್ಳೂರ ಆಯಿಲ್ ಮಿಲ್ ಮಾಲಿಕರಾದ ಸಿದ್ದು ಮಲ್ಲಿಕಾರ್ಜುನ್  ಮುಳ್ಳೂರ ಅವರು ಮಾತನಾಡಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿದ್ದು ಸುಮಾರು 500 ಚಿಲ್  ಶೇಂಗಾ,  200 ಚಿಲ್ ಶೆಂಗಾ ಕಾಳೂ ಮತ್ತು ಎಣ್ಣೆ ಕೂಡಾ ಇತ್ತು ಸುಮಾರು 18 ರಿಂದ 20 ಲಕ್ಷ  ರೂಪಾಯಿ ವರಿಗೂ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು