6:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸಿಎಂ ಬದಲಾಗ್ತಾರಾ ಬಿಡ್ತಾರಾ ಗೊತ್ತಿಲ್ಲ, ರಾಜ್ಯ ಬಿಜೆಪಿ ಅಧ್ಯಕ್ಷರಂತೂ ಬದಲಾಗುತ್ತಾರಂತೆ !: ಹಾಗಾದರೆ ಯಾರು ಹೊಸ ಅಧ್ಯಕ್ಷರು?

10/06/2021, 19:02

ರಾಜೀವಿಸುತ ಬೆಂಗಳೂರು

info.reporterkarnataka@gmail.com

ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಆಗಾಗ ಮುನ್ನಲೆಗೆ ಬರುತ್ತಿದ್ದರೂ ಇದೀಗ ನಾಯಕತ್ವ ಬದಲಾವಣೆ ವಿಷಯ ಬದಿಗೆ ಸರಿದಿದೆ. ಬದಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಬದಲಾಗುತ್ತಾರೆ ಎಂಬ ಮಾತು ಬಿಜೆಪಿ ಪಾಳಯದಲ್ಲೇ ಹರಿದಾಡಲಾರಂಭಿಸಿದೆ. 2023ರ ವಿಧಾನಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆಸಲು ಹೊಸ ಅಧ್ಯಕ್ಷರ ಹುಡುಕಾಟ ಶುರುವಾಗಿದೆ. ಇನ್ನೆರಡು ತಿಂಗಳಲ್ಲಿ ಹೊಸ ಅಧ್ಯಕ್ಷರ ನೇಮಕವಾಗಲಿದೆ ಎಂಬ ಮಾಹಿತಿ ಇದೆ.

ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದ ಅಧ್ಯಕ್ಷ ಗಾದಿಯನ್ನು ಬಿಜೆಪಿ ಹೈಕಮಾಂಡ್ ನೀಡಿತ್ತು. ಸಂಘಟನೆಯ ಚತುರ, ಪ್ರಬಲ ಹಿಂದುತ್ವವಾದಿ ಹಾಗೂ ಯಂಗ್ ಎಂಬ ಕಾರಣಕ್ಕೆ ಪಕ್ಷದ ಗದ್ದುಗೆ ನೀಡಲಾಗಿತ್ತು. ಹಾಗೆ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ಪಕ್ಷದ ವರಿಷ್ಠರು ಸಾಕಷ್ಟು ನಿರೀಕ್ಷೆ ಇಟ್ಟಿದ್ದರು. ಆದರೆ ಆ ನಿರೀಕ್ಷೆಗೆ ತಕ್ಕ ಫಲಿತಾಂಶ ಬಾರದಿರುವುದು ವರಿಷ್ಠರ ಕೆಂಗಣ್ಣಿಗೆ ಕಾರಣ ಎನ್ನಲಾಗಿದೆ. 

ಈ ಹಿಂದೆಯೇ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸುವ ಮಾತು ಕೇಳಿ ಬಂದಿತ್ತು. ಆದರೆ ಪಂಚ ರಾಜ್ಯಗಳ ಚುನಾವಣೆ ಹಾಗೂ ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರ ಹಾಗೂ ಲೋಕಸಭೆಯ ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಕಾರಣ ಅಧ್ಯಕ್ಷರ ಬದಲಾವಣೆಯನ್ನು ವರಿಷ್ಠರು ಮುಂದೂಡಿದ್ದರು ಮತ್ತು ನಳಿನ್ ಅವರಿಗೆ ಒಂದು ಅವಕಾಶ ನೀಡಿದ್ದರು ಎನ್ನಲಾಗಿದೆ.

ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆ ತೃಪ್ತಿಕರವಾಗಿರಲಿಲ್ಲ. ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಡಜನ್ ಗಟ್ಟಲೆ ಸಚಿವರುಗಳು ಓಡಾಡಿ ಪ್ರಚಾರ ಮಾಡಿದರೂ ಮಸ್ಕಿ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಗೆಲ್ಲಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸಿದ್ದರು. ಅದೇ ರೀತಿ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯಗಳಿಸಿದರೂ ಅದನ್ನು ‘ಅವಮಾನಕರ ಜಯ’ ಎಂದು ಪರಿಗಣಿಸಲಾಗಿತ್ತು. ಹಿಂದೆ ಇಲ್ಲಿ ಬಿಜೆಪಿ ಅಭ್ಯರ್ಥಿ  2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಿದ್ದರು. ಸುರೇಶ್ ಅಂಗಡಿ ನಿಧನದಿಂದ ತೆರವಾದ ಈ ಸ್ಥಾನಕ್ಕೆ ಅವರ ಪತ್ನಿಯನ್ನು ನಿಲ್ಲಿಸಲಾಗಿತ್ತು. ವಾಸ್ತವದಲ್ಲಿ ಸಿಂಪತಿ ಮತಗಳನ್ನು ಪಡೆದು ಗೆಲುವಿನ ಅಂತರ ಜಾಸ್ತಿಯಾಗಬೇಕಿತ್ತು. ಆದರೆ ಬಿಜೆಪಿ ಅಭ್ಯರ್ಥಿ ಬಹಳ ಕಷ್ಟದಲ್ಲಿ ಕಡಿಮೆ

ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದು ರಾಜ್ಯ ಬಿಜೆಪಿಗೆ ಮತದಾರರ ಎಚ್ಚರಿಕೆ ಎಂದೇ ಪರಿಗಣಿಸಲಾಯಿತು. ಇವೆಲ್ಲವನ್ನು ಬಿಜೆಪಿ ವರಿಷ್ಠರು ಸೂಕ್ಷ್ಮವಾಗಿ ಅವಲೋಕಿಸಿಯೇ ಅಧ್ಯಕ್ಷರ ಬದಲಾವಣೆ ಕುರಿತು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಚಿಗುರುತ್ತಿರುವುದು ಎಲ್ಲರು ಒಪ್ಪಿಕೊಳ್ಳುವ ವಿಚಾರವಾಗಿದೆ. ಕಾಂಗ್ರೆಸ್ ಮತ್ತೆ ಭದ್ರವಾಗುವುದನ್ನು ತಡೆಯಬಲ್ಲ ನಾಯಕ ರಾಜ್ಯ ಬಿಜೆಪಿಗೆ ಬೇಕಾಗಿದೆ. ಅದಲ್ಲದೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್, ಜನತಾದಳದ ಕುಮಾರಸ್ವಾಮಿ ಮುಂತಾದ ನಾಯಕರನ್ನು ಎದುರಿಸಬಲ್ಲ ಅಧ್ಯಕ್ಷರು 

ಬೇಕಾಗಿದೆ ಎಂದು ವರಿಷ್ಠರು ಹೇಳುತ್ತಾರಂತೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸನ್ನಿಹಿತವಾಗಿದೆ ಎನ್ನಲಾಗಿದೆ. ಹಾಗಾದರೆ ಯಾರು ನೂತನ ಅಧ್ಯಕ್ಷರಾಗುತ್ತಾರೆ? 

ಇತ್ತೀಚಿನ ಸುದ್ದಿ

ಜಾಹೀರಾತು