11:56 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ:  ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ

11/06/2021, 16:28

ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ.

ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲಂಕಾದಿಂದ ಭಾರತ ಪ್ರವೇಶಿಸಿದ್ದಾರೆ. ಪ್ರತಿಯೊಬ್ಬರಿಂದ 8-10 ಲಕ್ಷ ರೂ. ಏಜೆಂಟರು ಪಡೆದುಕೊಂಡಿದ್ದಾರೆ. ಭಾರತದ ಮೂಲಕ ಕೆನಡಾಕ್ಕೆ ಕಳುಹಿಸುವ ಭರವಸೆ ಇವರಿಗೆ ನೀಡಲಾಗಿತ್ತು.

ಮೊದಲಿಗೆ ಇವರನ್ನು ಕಳೆದ ತಿಂಗಳು ತಮಿಳುನಾಡಿಗೆ ಕರೆದು ತರಲಾಯಿತು. ಅಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಸುರಕ್ಷಿತವಲ್ಲ ಎಂದು ಮಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ತಪಾಸಣೆಯಿಲ್ಲದೆ ಅವರು ಹೇಗೆ ರಾಜ್ಯ ಪ್ರವೇಶಿಸಿದರು ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳೂರಿನ ಲಾಡ್ಜ್ ಮತ್ತು ಬಾಡಿಗೆ ಮನೆಯೊಂದರಲ್ಲಿ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು