12:55 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆಗಸದಲ್ಲಿ ಚಂದ್ರನ ಹುಡುಕುತ್ತಿದ್ದವರಿಗೆ ಕಾಣಿಸಿದ್ದು ಬೆಂಕಿಯ ಜ್ವಾಲೆ!:  ಏನಿದು ಜಲ್ವಿಸುತ್ತಾ ಹಾದು ಹೋಗಿದ್ದು?.!!

03/04/2022, 12:17

ಮಂಗಳೂರು(reporterkarnataka.com) ದೇಶದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದರ ನಡುವೆ ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಬೆಂಕಿಯ ಜ್ವಾಲೆಯೊಂದು ಸುಮಾರು ಹೊತ್ತು ಆಕಾಶದಲ್ಲಿ ಸಾಗಿದೆ.ಇದನ್ನ ಕಂಡವರು ಧೂಮಕೇತು ಇರಬೇಕು, ಹಬ್ಬದ ದಿನ ಅನಿಷ್ಟ ಕಂಡಂತಾಯ್ತು ಎಂಬಂತೆ ಮಾತನಾಡಿಕೊಂಡಿದ್ದಾರೆ.

ಬಳಿಕ ಅದು ಉಲ್ಕಾಪಾತ ಎಂದು ಹೇಳುವಂತಹ ಮಾತುಗಳು ಆರಂಭವಾಗಿದೆ. ಆದರೆ ಉಲ್ಕಾಪಾತದ ಬಣ್ಣ ಈ ರೀತಿಯಲ್ಲಿ ಇರುವುದಿಲ್ಲ ಎಂಬ ವಾದಗಳಿವೆ.

ಮಹಾರಾಷ್ಟ್ರ ಮಧ್ಯಪ್ರದೇಶದ ಭಾಗಗಳಲ್ಲಿ ಈ ಬೆಂಕಿ ವಿಸ್ಮಯ ಕಂಡು ಬಂದಿದೆ. ವಿಶೇಷ ಅಂದರೆ ತೀರಾ ಹತ್ತಿರದಲ್ಲಿ ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಇನ್ನೂ ಖಗೋಳ ಶಾಸ್ತ್ರಜ್ಞರ ಪ್ರಕಾರ ಇದು ಉಲ್ಕಾಪಾತವಾಗಿರದೇ ಚೈನಾ 2021 ರಲ್ಲಿ ಆಕಾಶಕ್ಕೆ ಹಾರಿಬಿಟ್ಟ ರಾಕೆಟ್​ನ ಅವಶೇಷಗಳು ಆಗಿರಬಹುದು ಎನ್ನಲಾಗುತ್ತಿದೆ.

ಮತ್ತೆ ಕೆಲವರು ಯಾವುದೋ ರಾಷ್ಟ್ರದ ಸ್ಯಾಟಲೈಟ್ ಭೂಕ್ಷಕ್ಷೆಗೆ ಬಂದು, ಉರುಳುತ್ತಿರುವ ದೃಶ್ಯ ಇದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇದು ರಾಕೆಟ್ ಒಂದರ ಅವಶೇಷವಾಗಿದ್ದು, ಇದು ನೆಲಕ್ಕೆ ಬಿದ್ದು ಉಳಿದ ಪಾರ್ಟ್​ಗಳನ್ನ ಸ್ಥಳೀಯವಾಗಿ ನೋಡಿದವರು ಇದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು