10:23 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಅಮೆರಿಕದ ನೆಲದಿಂದ ‘ಶಕುಂತಲಾ’ ಯಶಸ್ವಿ ಉಡಾವಣೆ: ಕಾಫಿನಾಡಿನ ಯುವ ವಿಜ್ಞಾನಿಯ ಅದ್ಬುತ ಸಾಧನೆ

06/04/2022, 12:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತನ್ನದೇ ಸ್ವಂತ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿ ಉಪಗ್ರಹವನ್ನು ತಯಾರಿಸಿ ಅಮೆರಿಕದ ಸ್ಪೆಸೆಕ್ಸ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ದೇಶವೇ ಹೆಮ್ಮೆಪಡುವಂತ ಸಾಧನೆಯನ್ನು ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ಯುವಕ ಅವೇಜ್‌ ಅಹಮದ್‌ ಮಾಡಿದ್ದಾರೆ. 

ಆಲ್ದೂರು ಜನತೆ ತಮ್ಮ ಊರಿನ ಯುವಕನ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ

ಅವೇಜ್‌ ಅಹಮದ್‌ ಅವರ ಸಂಶೋಧನೆಯ ಉಪಗ್ರಹ ಬೇರೆ ಎಲ್ಲಾ ಉಪಗ್ರಹಗಳಿಗಿಂತ ಶೇ.50 ಹೆಚ್ಚು ಡೇಟಾವನ್ನು ಬಿಡುಗಡೆಗೊಳಿಸುತ್ತದೆ. ಈ ಉಪಗ್ರಹ ಭೂಮಿಯ ಚಲನವಲನದ ಫೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತದೆ.

ಇಸ್ರೋದಿಂದಲೇ ತಮ್ಮ ಪ್ರಥಮ ಉಪಗ್ರಹ ಆನಂದ್‌ ಅನ್ನು ಉಡಾವಣೆ ಮಾಡುವ ಮಹತ್ವಕಾಂಕ್ಷೆ ಅವೇಜ್‌ ಅವರದಾಗಿತ್ತು. ಆದರೆ ಇಸ್ರೋದಲ್ಲಿ ಉಡಾವಣೆಗೆ ಡೇಟ್‌ ಸಿಗದ ಕಾರಣ ತಮ್ಮದೇ ನಿರ್ಮಾಣದ ಮತ್ತೂಂದು ಉಪಗ್ರಹ ಶಕುಂತಲಾವನ್ನು ಅಮೆರಿಕಾದ ಸ್ಪೇಸೆಕ್ಸ್ ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಶೀಘ್ರದಲ್ಲೇ ಇಸ್ರೋದಿಂದ ತಮ್ಮ ಮೊದಲ ನಿರ್ಮಾಣದ ಉಪಗ್ರಹವನ್ನು ಉಡಾವಣೆ ಮಾಡುವ ಕನಸು ಶೀಘ್ರದಲ್ಲೇ ನನಸಾಗಲಿದೆ.

ಅವೇಜ್‌ ಅಹಮದ್‌ ಆಲ್ದೂರಿನ ರಾಯಲ್‌ ಮೆಡಿಕಲ್ಸ್‌ ಮಾಲೀಕ ನದೀಮ್‌ ಅಹಮದ್‌ ಅವರ ಪುತ್ರ. ಆಲ್ದೂರಿನ ರೋಸ್‌ ಬಡ್‌, ಅಕ್ಷರ ಪಬ್ಲಿಕ್‌ ಸ್ಕೂಲ್‌ನಲ್ಲಿ ಪ್ರಾಥಮಿಕ ಹಂತದ ಶಿಕ್ಷಣ ಪಡೆದು ಪ್ರೌಡಶಿಕ್ಷಣವನ್ನು ಆಲ್ದೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಮುಗಿಸಿದರು. ಸಿಇಟಿಯಲ್ಲಿ 477ನೇ ರ್‍ಯಾಂಕ್‌ ಪಡೆದು ಆರ್‌.ವಿ. ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಜೆಇಇ ಪರೀಕ್ಷೆಯಲ್ಲಿ 2000 ರ್‍ಯಾಂಕ್‌ ಪಡೆದು ಭಾರತದ ನಂ.1 ನಿಟ್‌ ಕಾಲೇಜಿನಲ್ಲಿ ಸೀಟು ಪಡೆದುಕೊಂಡರು. ಭಾರತದ ನಂ.1 ಖಾಸಗಿ ಕಾಲೇಜು ಬಿಟ್ಸ್‌-ಪಿಲಾನಿ(ಬಿರ್ಲಾ ಇನ್ಸ್‌ಟಿಟ್ಯೂಟ್‌

ಆಫ್‌ಟೆಕ್ನಾಲಜಿ ಆ್ಯಂಡ್‌ ಸೈನ್ಸ್‌) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಮುಂದುವರಿಸಿದರು.

ಎಂಎಸ್ಸಿ ಮ್ಯಾಥಮೆಟಿಕ್ಸ್‌ ಡಿಗ್ರಿ ಪಡೆದು ಹೊರಬಂದ ಪಿಕ್ಸೆಲ್‌ ಎಂಬ ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾರಂಭಿಸಿದ್ದಾರೆ.

ಬಾಲ್ಯದಿಂದಲೂ ಬ್ಯಾಹ್ಯಾಕಾಶದ ಬಗ್ಗೆ ಕುತೂಹಲ, ಆಸಕ್ತಿ ಬೆಳೆಸಿಕೊಂಡಿದ್ದು ಎಲನ್‌ ಮಾಸ್ಕ್ನ ಎರೋಸ್ಪೇಸ್‌ ಕಂಪೆನಿ “ಸ್ಪೆಸೆಕ್ಸ್‌’ ನಿಂದ ಪ್ರಭಾವಿತರಾದ ಅವೇಜ್‌ ಭಾರತದಲ್ಲಿಯೂ ಇದೇ ರೀತಿಯ ಕಂಪೆನಿ ಪ್ರಾರಂಭಿಸಬೇಕೆಂಬ ಹೆಬ್ಬಯಕೆ ಇಟ್ಟಿಕೊಂಡು ಇಂದು ತನ್ನದೇ ಏರೋಸ್ಪೇಸ್‌ ಕಂಪೆನಿಯನ್ನು ಪ್ರಾಂರಭಿಸುವ ಮೂಲಕ ತಮ್ಮ ಕನಸಿಗೆ ರೆಕ್ಕೆ ಕಟ್ಟಿದ್ದಾರೆ. ತಾವು ನಿರ್ಮಿಸಿದ ಖಾಸಗಿ ಉಪಗ್ರಹವನ್ನು ಅಮೆರಿಕದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು