5:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

11/04/2022, 15:53

ಬೆಂಗಳೂರು(reporterkarnataka.com): ಬೆಲೆಯೇರಿಕೆ ಕುರಿತಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರಗಿಸಲಾಗುವುದು ಎಂದರು.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು