6:48 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು