3:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು