4:44 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅಥಣಿ: ಒಂದೇ ದಿನ ಅಂಚೆ ಕಚೇರಿ ಹಾಗೂ 6 ಮನೆಗಳಿಗೆ ಕನ್ನ; ಲಕ್ಷಾಂತರ ಮೌಲ್ಯದ ನಗ, ನಗದು ಕಳವು

25/04/2022, 09:14

ಬೆಳಗಾವಿ(reporterkarnataka.com):

ಅಥಣಿ ಖಿಳೆಗಾಂವ ಗ್ರಾಮದಲ್ಲಿ ಒಂದೇ ದಿನ 6 ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ ಮಾಡಿದ ಘಟನೆ ನಡೆದಿದೆ.

ಖಿಳೇಗಾಂವ ಗ್ರಾಮದಲ್ಲಿ ಒಂದೇ ದಿನ 6 ಮನೆಗಳ ಹಾಗೂ ಅಂಚೆ ಕಛೇರಿಯ ಬೀಗ ಮುರಿದು ಲಕ್ಷಾಂತರ ರೂ.ಗಳ ಚಿನ್ನಾಭರಣ, ಮೋಟಾರ್ ಬೈಕ್, ಆಡಿನ ಮರಿ, ಟಿವಿ ಮತ್ತು ನಗದು ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ

ಖಿಳೇಗಾಂವ ಗ್ರಾಮದ ಸುಶೀಲಾಬಾಯಿ ಹೊನ್ನಾಗೋಳ ಮನೆಯಲ್ಲಿ 25 ಸಾವಿರ ನಗದು ಹಾಗೂ 1 ತೊಲೆ ಬಂಗಾರದ ಆಭರಣ, ಶೀತಲ್ ಸುರೇಶ ಚಂಡಿ ಮನೆಯಲ್ಲಿ 3 ತೊಲೆ ಬಂಗಾರ ಹಾಗೂ ಸ್ಮಾರ್ಟ ಟಿವಿಯನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಲ್ಲದೆ  ಸಾಗರ ಸದಾಶಿವ ದಿವಾನಗೋಳ ಮನೆಯ ಹೊರಗಿದ್ದ ಮೋಟಾರ್ ಬೈಕ್ ಹಾಗೂ ಒಂದು ಆಡಿನ ಮರಿಯನ್ನು ಹೊತ್ತುಕೊಂಡು ಹೋಗಿದ್ದಾರೆ. ಗ್ರಾಮದಲ್ಲಿರುವ ಅಪ್ಪಾಸಾಹೇಬ ಮಲ್ಲಾಸಾಹೇಬ ಬಸರಗಿ ಮನೆಯ ಬೀಗ ಮುರಿದು ಎಲ್ಲ ಕಡೆ ಹುಡುಕಿದ ಕಳ್ಳರು ಅಲ್ಲಿ ಎನೂ ಸಿಗದೇ ಇದ್ದಾಗ ಮನೆಯ ಇನ್ನೊಂದು ಭಾಗದಲ್ಲಿದ್ದ ಅಂಚೆ ಕಛೇರಿಯ ಬೀಗವನ್ನೂ ಕೂಡ ಮುರಿದು ದಾಖಲೆಗಳನ್ನು ತಡಕಾಡಿ ಏನೂ ಸಿಗದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. 

ಸುದ್ದಿ ತಿಳಿದ ತಕ್ಷಣ ಅಥಣಿ ಪೊಲೀಸ್ ಠಾಣೆಯ ಪಿಎಸ್‍ಐ ಕುಮಾರ ಹಾಡಕರ ಖಿಳೇಗಾಂವ ಗ್ರಾಮಕ್ಕೆ ಭೇಟಿ ನೀಡಿ ಕಳ್ಳತನವಾದ ಎಲ್ಲ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಮನೆಗೆ ಬೀಗ ಹಾಕಿ ಬೇರೆ ಊರಿಗೆ ಹೋಗುವ ಮುನ್ನ ಪಂಚಾಯತ ಸಿಬ್ಬಂದಿ ಮೂಲಕ ಗ್ರಾಮದ ಬೀಟ್ ಪೊಲೀಸ್ ರಿಗೆ ಮಾಹಿತಿ ನೀಡಿ ಅಥವಾ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಹೋಗಿ ಜೊತೆಗೆ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ನಿಮಗೆ ವಿಶ್ವಾಸ ಎನಿಸಿದ ಸಂಬಂಧಿಕರ ಅಥವಾ ಹಿತೈಶಿಗಳ ಮನೆಯಲ್ಲಿಟ್ಟು ಹೋಗಿ ಎಂದು ಮನವಿ ಮಾಡಿದರು. 

ಖಿಳೇಗಾಂವ ಗ್ರಾಮ ಪಂಚಾಯತ ಅಧ್ಯಕ್ಷ ರವಿ ನಾಗಗೋಳ ಮಾತನಾಡಿ, ಕೆಲವೇ ದಿನಗಳಲ್ಲಿ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುತ್ತೇವೆ ಅಲ್ಲದೆ ಗ್ರಾಮಸ್ಥರು ಕೂಡ ಮನೆಯಿಂದ ಹೊರ ಹೋಗುವಾಗ ಮನೆಯಲ್ಲಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ಇಡಬೇಡಿ ಹಾಗೇನಿದ್ದರೂ ಕೂಡ ಹಣ ಮತ್ತು ಚಿನ್ನಾಭರಣಗಳನ್ನು ಸಂಬಂಧಿಕರ ಮನೆಯಲ್ಲಿ ಇಟ್ಟು ಹೋಗಿ ಎಂದು ಮನವಿ ಮಾಡಿದರು.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು