7:09 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು