8:51 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಅಕ್ಷಯ ತೃತೀಯ: ಮಂಗಳೂರು ನಗರದಲ್ಲೇ 50 ಕೋಟಿ ರೂ. ಮೌಲ್ಯದ ಚಿನ್ನ ಖರೀದಿ!!; ಕಳೆದ ವರ್ಷಕ್ಕಿಂತ ಶೇ.35ರಷ್ಟು ಹೆಚ್ಚಳ

04/05/2022, 19:31

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಚಿನ್ನ ಖರೀದಿಯೊಂದಿಗೆ ಅಕ್ಷಯ ತೃತೀಯ ಸಂಪನ್ನಗೊಂಡಿದೆ. ಮಂಗಳೂರು ನಗರದಲ್ಲೇ ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 35ರಷ್ಟು ಏರಿಕೆಯಾಗಿದೆ.

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಿದರೆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಭಾರತೀಯರಲ್ಲಿದೆ. ಈ ಹಿನ್ನೆಲೆಯಲ್ಲೇ ಬಡವರು ಮೂಗು ಬೊಟ್ಟು ಖರೀದಿಸಿ ಸಂಪತ್ತು ವೃದ್ಧಿಯಾಗಲಿ ಎಂದು ದೇವರಲ್ಲಿ ಬೇಡಿಕೊಂಡರೆ, ಮೆಷಿನ್ ಇಟ್ಟು ನೋಟು ಎಣಿಸುವವರು, ಭ್ರಷ್ಟಾಚಾರ, ಲಂಚಾವತಾರ, ಕಮಿಷನ್ ನಿಂದ ಹಣ ಮಾಡಿದ ದೊರೆಗಳು ಕೆಜಿಗಟ್ಟಲೆ ಬಂಗಾರ ಖರೀದಿಸಿ ಮತ್ತಷ್ಟು ಸಂಪತ್ತು ವೃದ್ಧಿಗೆ ಮತ್ತೆ ದೇವರ ಮೊರೆ ಹೋಗುತ್ತಾರೆ. ಆದ್ದರಿಂದಲೇ ಮಂಗಳೂರು ನಗರವೊಂದರಲ್ಲೇ ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನವನ್ನು ಗ್ರಾಹಕರು ಖರೀದಿಸಿದ್ದಾರೆ. ಮಲಬಾರ್, ಅಲುಕಾಸ್, ತನಿಷ್ಕಾದಂತಹ ದೊಡ್ಡ ಜುವೆಲ್ಲರಿ ಶಾಪ್ ಮಾತ್ರವಲ್ಲದೆ ಸಣ್ಣ ಅಂಗಡಿಗಳಿಂದಲೂ ಚಿನ್ನ ಖರೀದಿಯಾಗಿದೆ. ಅಕ್ಷಯ ತೃತೀಯ ಮತ್ತು ಅದರ ಹಿಂದಿನ ದಿನ ಸೇರಿ ಒಟ್ಟು 50 ಕೋಟಿ ರೂ.ಗಳ ವ್ಯವಹಾರ ನಡೆದಿದೆ. 

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಿನ್ನ ಖರೀದಿಯಲ್ಲಿ ಶೇ. 35ರಷ್ಟು ಏರಿಕೆಯಾಗಿದೆ ಎಂದು ಸೌತ್ ಕೆನರಾ ಜುವೆಲ್ಲರ್ಸ್ ಅಸೋಸಿಯೇಷನ್ 

ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಶೇಟ್ ಅವರು ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಹಳದಿ ಲೋಹಕ್ಕೆ ಬಹಳಷ್ಟು ಮಹತ್ವ ಇದೆ. ಭಾರತೀಯ ಮಹಿಳೆಯರಿಗೆ ಚಿನ್ನದ ಹುಚ್ಚು ಜಾಸ್ತಿ. ಚಿನ್ನಕ್ಕಾಗಿ ಡೈವೋರ್ಸ್ ಆದ ಘಟನೆಗಳು ಕೂಡ ಇದೆ. 

ಚಿನ್ನವನ್ನು’ ನ್ಯೂಟ್ರಲ್ ಕರೆನ್ಸಿ’ ಎಂದೇ ಪರಿಗಣಿಸಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿರುವ ಚಿನ್ನದ ಮೌಲ್ಯದ ಮೇಲೆ ನೋಟು ಮುದ್ರಿಸುತ್ತದೆ. ಚಿನ್ನದ ರೇಟ್ ಹೆಚ್ಚಾದಾಗ  ಆರ್ ಬಿಐ ಬಂಗಾರ ಮಾರುತ್ತದೆ. ಹಾಗೆ ಮತ್ತೆ ಖರೀದಿಸಿ ಸಮತೋಲವನ್ನು ಕಾಪಾಡುತ್ತದೆ. ಸಾಮಾನ್ಯವಾಗಿ ಡಾಲರ್ ಮೌಲ್ಯ ಕುಸಿದಾಗ ಚಿನ್ನದ ಬೆಲೆ ಏರಿಕೆಯಾಗುತ್ತದೆ. ಡಾಲರ್ ಮೌಲ್ಯ ಏರಿಕೆಯಾದಾಗ ಚಿನ್ನದ ಬೆಲೆ ಕುಸಿಯುತ್ತದೆ. ಪ್ರಸ್ತುತ ಒಂದು ಗ್ರಾಮ್ ಚಿನ್ನಕ್ಕೆ 5300 ರೂ. ಬೆಲೆ ಇದೆ. ವಿಶೇಷವೆಂದರೆ ರಾಜ್ಯದಲ್ಲಿ ನೆಲೆಸಿರುವ ಧರ್ಮ ಸಂಘರ್ಷ ಚಿನ್ನ ಖರೀದಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. 

ಇತ್ತೀಚಿನ ಸುದ್ದಿ

ಜಾಹೀರಾತು