5:56 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ’: ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ರಾವ್ ಹಾಗೂ ದೀಕ್ಷ್ಣಕಲ್ಮಾಡಿ ಆಯ್ಕೆ

07/05/2022, 17:45

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ವಿ. ರಾವ್ ಹಾಗೂ ದೀಕ್ಷ್ಣಎನ್ . ಕಲ್ಮಾಡಿ ಆಯ್ಕೆಗೊಂಡಿದ್ದಾರೆ.

ಪಾಣೆಮಂಗಳೂರು ನಿವಾಸಿಯಾದ ವೆಂಕಟೇಶ್ ರಾವ್ ಬಿ. ಹಾಗೂ ರಶ್ಮಿ ವಿ. ರಾವ್ ಅವರ ಪುತ್ರಿಯಾದ ಮೇಘನಾ 7ನೇ ತರಗತಿಯ ವಿದ್ಯಾರ್ಥಿನಿ. ಬಂಟ್ವಾಳದ ಎಸ್. ವಿ.ಎಸ್. ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ.
ಸಂಗೀತ, ಚಿತ್ರಕಲೆ, ಡ್ಯಾನ್ಸ್ ನಲ್ಲಿ ಆಸಕ್ತಿ ಹೊಂದಿದ್ದಾಳೆ. ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಆಗಿದ್ದು ಸೀನಿಯರ್ ಕಲಿಯುತ್ತಿದ್ದಾಳೆ. ಗುರುಗಳು ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತ ಆಚಾರ್ಯ ಅವರು ಮೇಘನಾಳ ಗುರುಗಳು.
ಸುಗಮ ಸಂಗೀತವನ್ನು ಯಶು ಸ್ನೇಹ ಗಿರಿ ಅವರ ಬಳಿ ಕಲಿಯುತ್ತಿದ್ದಾಳೆ. ಪ್ರತಿಭಾ ಕಾರಂಜಿಯಲ್ಲಿ ನಾಲ್ಕನೇ ತರಗತಿಯಲ್ಲಿ ತಾಲೂಕು ಮಟ್ಟದ ವರೆಗೆ ಹೋಗಿರುತ್ತಾಳೆ. ಸೂಕ್ತ ನ್ಯೂಸ್ ಆಯೋಜಿಸಿರುವ ಗಾನಸಿರಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಚಿನ್ನರ ಲೋಕ ಟ್ರಸ್ಟ್ ಆಯೋಜಿಸಿರುವ ಕರಾವಳಿ ಸರಿಗಮಪ ಸ್ಪರ್ಧೆಯಲ್ಲಿ(2021) ಸೆಮಿಫೈನಲಿಸ್ಟ್ ಆಗಿದ್ದಳು. ವಾಯ್ಸ್ ಆಫ್ ಕಲಾಂಜಲಿ ಜೂನಿಯರ್ ಆಡಿಷನ್ ನಲ್ಲಿ ಸೆಲೆಕ್ಟ್ ಆಗಿ ಮುಂದಿನ ಭಾಗಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಡೆಸಿದ ಜೋಕುಲೆನ ತುಳು ಪದ ರಂಗಿತ ಪಂತ ದಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾಳೆ. ಮುಳಿಯ ಗಾನ ರಥ 2021 ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು