8:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು