1:04 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಹೀಂದ್ರಾ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌: ಬೆಂಗಳೂರಿನ ತಂತ್ರಜ್ಞಾನ ಕೇಂದ್ರದಲ್ಲಿ ಹೊಸ ಕಚೇರಿ

12/05/2022, 13:20

ಬೆಂಗಳೂರು(reporterkarnataka.com): ಮಹೀಂದ್ರಾ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ (ಎಂಇಎಂಎಲ್) ವಿಭಾಗಗಳಾದ – ಲಾಸ್ಟ್ ಮೈಲ್ ಮೊಬಿಲಿಟಿ (ಎಲ್‌ಎಂಎಂ) ಮತ್ತು ಇವಿ ಟೆಕ್ನಾಲಜಿ ಸೆಂಟರ್ (ಇವಿಟಿಇಸಿ) ಇವು ವೆಲಂಕಣಿ ಟೆಕ್‌ಪಾರ್ಕ್ 43, ಹೊಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, 1ನೇ ಹಂತ, ಬೆಂಗಳೂರು ಈ ವಿಳಾಸದಲ್ಲಿ ಕಾರ್ಯ ನಿರ್ವಹಿಸುತ್ತಿವೆ. 

ಹೊಸ ಕಚೇರಿಯು ಎಂಇಎಂಎಲ್‌ನ ವಿಸ್ತರಣೆ ಕಾರ್ಯತಂತ್ರಕ್ಕೆ ಅನುಗುಣವಾಗಿದೆ ಹಾಗೂ ಇಲ್ಲಿನ ಉದ್ಯೋಗಿಗಳಿಗೆ ಅತ್ಯಾಕರ್ಷಕ ಕಾರ್ಯಕ್ಷೇತ್ರವನ್ನು ಸೃಷ್ಟಿಸಲಾಗಿದೆ. ಬೆಂಗಳೂರಿನ ಈ ಹೊಸ ಕಚೇರಿಯು 500ಕ್ಕೂ ಹೆಚ್ಚು ಉದ್ಯೋಗಿಗಳ ಆಸನ ಸಾಮರ್ಥ್ಯ ಹೊಂದಿದೆ ಮತ್ತು ಇವಿಟಿಇಸಿಯ ಸಂಪೂರ್ಣ ಕಾರ್ಯಪಡೆ ಮತ್ತು ಎಲ್‌ಎಂಎಂನ ಕೆಲವು ಕಾರ್ಯಗಳನ್ನು ಹೊಂದಿದೆ. ಏಪ್ರಿಲ್ 1ರಿಂದ ಉದ್ಯೋಗಿಗಳು ಕೋವಿಡ್ -19ರ ಅಗತ್ಯ ನಿಯಮಗಳನ್ನು ಅನುಸರಿಸುವ ಮೂಲಕ ಕಚೇರಿಯಿಂದ ಕೆಲಸವನ್ನು ಪ್ರಾರಂಭಿಸಿದ್ದಾರೆ.

ವೆಲಂಕಣಿ ಆವರಣವು ವಿಶಾಲವಾಗಿದ್ದು, ಪರಿಸರ ಸ್ನೇಹಿಯಾಗಿರುವ ನವೀಕೃತ ಮೂಲಸೌಕರ್ಯಗಳನ್ನು ಹೊಂದಿದೆ ಮತ್ತು ಸ್ವಾವಲಂಬಿ ಕ್ಯಾಂಪಸ್, ಕಾರ್ಯತಂತ್ರವಾಗಿ ನಗರದ ತಂತ್ರಜ್ಞಾನ ಕೇಂದ್ರದಲ್ಲಿದೆ. ಈ ಹೊಸ ಕಚೇರಿಯು ಉದ್ಯೋಗಿಗಳ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಅತ್ಯಾಧುನಿಕ ಇವಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವಲ್ಲಿ, ನಮ್ಮ ಪ್ರಯತ್ನಗಳನ್ನು ಚುರುಕುಗೊಳಿಸಿ ಎಲೆಕ್ಟ್ರಿಕ್ 3-ಚಕ್ರ ವಾಹನ ವಿಭಾಗದಲ್ಲಿ ನಂಬರ್ ಒನ್ ಸ್ಥಾನವನ್ನು ಭದ್ರಪಡಿಸುವಲ್ಲಿ ಸಹಕಾರಿಯಾಗಲಿದೆ.

ಇವಿಟಿಇಸಿ ಆಟೋಮೋಟಿವ್ ಟೆಕ್ನಾಲಜೀಸ್ ಮುಖ್ಯಸ್ಥ ಪಂಕಜ್ ಸೋನಾಲ್ಕರ್ ಅವರು, “ನೌಕರರು ಹೊಸ ಕಚೇರಿಯ ಬಗ್ಗೆ ಉತ್ಸುಕರಾಗಿದ್ದಾರೆ. ಭವಿಷ್ಯಕ್ಕಾಗಿ ನಾವು ಇವಿ ತಂತ್ರಜ್ಞಾನಗಳನ್ನು ಇನ್ನಷ್ಟು ಉತ್ಸಾಹದಿಂದ ಅಭಿವೃದ್ಧಿಪಡಿಸುವುದನ್ನು ಮುಂದುವರಿಸುತ್ತೇವೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ’ ಎಂದಿದ್ದಾರೆ.

ಎಂಇಎಂಎಲ್‌ನ ಸಿಇಒ ಸುಮನ್ ಮಿಶ್ರಾ ಅವರು, “ಉದ್ಯೋಗಿಗಳ ಕಾರ್ಯಕ್ಷಮತೆ ಹೆಚ್ಚಿಸುವಲ್ಲಿ ಕೆಲಸದ ಸ್ಥಳ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಸಿರು ಕ್ಯಾಂಪಸ್ ಈಗ ಕಚೇರಿಯಿಂದ ಕೆಲಸದ ಸ್ವರೂಪಕ್ಕೆ ಮರಳುತ್ತಿರುವ ನಮ್ಮ ಉದ್ಯೋಗಿಗಳಲ್ಲಿ ಹೊಸ ಶಕ್ತಿ ತುಂಬುತ್ತದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಮುಂಬೈನ ಕಂಡಿವಲಿಯಲ್ಲಿ ಎಲ್‌ಎಂಎಂ ಸಂಪೂರ್ಣ ಕಾರ್ಯಕಾರಿ ಕಚೇರಿಯನ್ನು ಮುಂದುವರಿಸುತ್ತದೆ. ಇನ್ನೋವೇಶನ್ ಸೆಂಟರ್ ಮತ್ತು ಬೊಮ್ಮಸಂದ್ರ ಪ್ಲಾಂಟ್ ಸಿಬ್ಬಂದಿಗಳು ಬೆಂಗಳೂರಿನ ತಮ್ಮ ಸ್ಥಳಗಳಿಂದ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು