8:03 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೋವಿಡ್ ಸೋಂಕಿತರ ಪ್ರಮಾಣ ತಗ್ಗಿಸಲು  ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚನೆ

16/06/2021, 10:35

ಮಂಗಳೂರು (reporterkarnataka news): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತ್ತಿಯಲ್ಲಿ ಪ್ರಸ್ತುತ ಶೇ.17ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚಿಸಲಾಗಿದೆ.

ಸೋಂಕಿನ ಲಕ್ಷಣಗಳಿರುವ ವ್ಯಕ್ತಿಗಳು ತಪಾಸಣೆಗಾಗಿ ಸುತ್ತಾಡುತ್ತಿರುವುದರಿಂದ ಮತ್ತಷ್ಟು ಸೋಂಕು ಹರಡುವ ಸಾಧ್ಯತೆಗಳಿರುವುದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಪತ್ತೆ ಹಚ್ಚಲಾಗುವ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡವನ್ನು ರಚಿಸಲಾಗಿದೆ.

ಈ ತಂಡವು ಸೋಂಕಿನ ಲಕ್ಷಣಗಳುಳ್ಳ ವ್ಯಕ್ತಿಗಳ ಸ್ಥಳಕ್ಕೆ ಬಂದು ಪರೀಕ್ಷೆ ಮಾಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಲು ಪಾಲಿಕೆ ವತಿಯಿಂದ ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ  ಎಂಬ ಪರಿಕಲ್ಪನೆಯಲ್ಲಿ ಪ್ರತ್ಯೇಕವಾದ ದೂ ಸಂ: 0824-2455674 ನ್ನು ನಿಗಧದಿಪಡಿಸಿಕೊಂಡು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.ಈ ಸಹಾಯವಾಣಿ ಕೇಂದ್ರವು ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯಾಚರಿಸಲಿದೆ. 

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕಾರ್ಯಚರಣೆಯನ್ನು ನಡೆಸಲಾಗಿದ್ದು, ಜೂನ್ 11ರಂದು ಒಟ್ಟು 20 ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿದ್ದು, ರೂ. 16,500 ದಂಡವನ್ನು ವಿಧಿಸಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು