12:33 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ

16/06/2021, 10:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇಡಿಕೆ ಪೂರೈಸಿದಂತಾಗಿದೆ.

ಈ ಮುನ್ನ ನದಿ ಪಾತ್ರದ ರೈತರಿಗೆ ದಿನಕ್ಕೆ ಬರೇ 8 ತಾಸು ವಿದ್ಯುತ್ ಪೂರೈಸಲಾಗುತ್ತಿತ್ತು. ಇದರಿಂದ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಬಹಳಷ್ಟು ತೊಂದರೆಯಾಗುತ್ತಿತ್ತು. ರೈತರು ಈ ವಿಷಯನ್ನು ಸಚಿವ ಶ್ರೀಮಂತ ಪಾಟೀಲ್  ಗಮನಕ್ಕೆ ತಂದಿದ್ದರು.

ವಿದ್ಯುತ್ ಇಲಾಖೆಯ ಅಧಿಕಾರಿಗಳನ್ನು ಕಚೇರಿಗೆ ಕರೆದು ಜನಪ್ರತಿನಿಧಿಗಳು ಅಧಿಕಾರಿಗಳೊಂದಿಗೆ

ಚರ್ಚಿಸಿ ದಿನದ 20 ತಾಸು ಕಾಲ ವಿದ್ಯುತ್ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಪರಿಣಾಮ ಇದೀಗ

ದಿನದ 20 ಗಂಟೆಗಳ ಕಾಲ ಡೆಲ್ಟಾ ರೀತಿಯಲ್ಲಿ ವಿದ್ಯುತ್ ಪ್ರಾರಂಭಿಸಲಾಗಿದೆ. ಇದರಿಂದ

ಈಗಾಗಲೇ ಹಲವಾರು ರೈತರು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಖುಷಿಯಲ್ಲಿ

ವಿವಿಧ ನೀರಾವರಿ ಸಂಘಗಳ ಸದಸ್ಯರು, ಸಮಸ್ತ ರೈತರು  ಕಾಗವಾಡದ ಪ್ರವಾಸಿ ಮಂದಿರದಲ್ಲಿ 

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಶ್ರೀಮಂತ ಪಾಟೀಲ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ  ಸಚಿವರು ಮಾತನಾಡಿ, ನಮ್ಮ ಕ್ಷೇತ್ರದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ತೊಂದರೆಯಾಗಿತ್ತು, ಇದನ್ನು ಮನಗಂಡು ರೈತರಿಗೆ ಅನುಕೂಲವಾಗಲಿ ಎಂದು ಡೆಲ್ಟಾ ರೀತಿಯಲ್ಲಿ ದಿನದ 20 ಗಂಟೆಗಳ ಕಾಲ ಹೆಚ್ಚಿನ ವಿದ್ಯುತ್ ನೀಡಲಾಗಿದೆ. ಎಲ್ಲ ರೈತರು ಇದರ ಉಪಯೋಗ ಪಡೆದು ಉತ್ತಮವಾಗಿ ಬೆಳೆ ಬೆಳೆಯಿರಿ ಎಂದು ರೈತರು ಹಾಗೂ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು.

ಸ್ಥಳೀಯ ಮುಖಂಡರು, ವಿವಿಧ ಗ್ರಾಮದ ರೈತರು, ಹಲವಾರು ನೀರಾವರಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು