3:35 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ

20/05/2022, 23:38

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. 

ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಎಂಸಿಎಫ್ ಸಂಸ್ಥೆಯ ಸಹಕಾರದೊಂದಿಗೆ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರು ವೈದ್ಯರನ್ನು ನೇಮಕಗೊಳಿಸಲು ಜಿಲ್ಲಾಡಳಿತದೊಂದಿಗೆ ಬಹಳಷ್ಟು ಸಹಕಾರ ನೀಡಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಸದ್ಯ ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವೈದ್ಯರನ್ನು ನೇಮಿಸಲಾಗಿದೆ ಎಂದರು.

ತೋಟ ಬೆಂಗ್ರೆ, ಕಸಬಾ ಬೆಂಗ್ರೆ ಹಾಗೂ ಬೊಕ್ಕಪಟ್ಣ ಬೆಂಗ್ರೆ ಪರಿಸರದ ನಾಗರಿಕರು ಚಿಕಿತ್ಸೆಗಾಗಿ ನಗರಕ್ಕೆ ಬರಬೇಕಾಗಿತ್ತು. ಬೆಂಗ್ರೆಯಲ್ಲಿ ಆರೋಗ್ಯ ಕೇಂದ್ರ ಪುನರಾರಂಭಿಸುವುದರಿಂದ ನಾಗರಿಕರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವ‌ ಸೌಲಭ್ಯ ಒದಗಿಸಲಾಗಿದೆ. ಬೆಂಗ್ರೆ ಪರಿಸರದ ಸಾರ್ವಜನಿಕರು ನಗರವನ್ನೇ ಅವಲಂಬಿಸಿರುವುದರಿಂದ ಬೇಡಿಕೆಗಳನ್ನು ಇಲ್ಲಿಯೇ ಪೂರೈಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ ಎಂ.ಸಿ.ಎಫ್ ಸಂಸ್ಥೆಯ ಪ್ರಮುಖರಿಗೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಪ್ರಮುಖರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಬೆಂಗ್ರೆಯ ನಾಗರಿಕರು ಪ್ರತಿಯೊಂದು ವಿಚಾರಕ್ಕೂ ಸುತ್ತು ಬಳಸಿ ಬರಬೇಕಾಗಿರುವುದರಿಂದ ಇಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ ಬಹಳಷ್ಟು ಉಪಯೋಗಕರವಾಗಿದೆ. ಈ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಎಂ.ಸಿ.ಎಫ್ ಮೆಡಿಕಲ್ ಚೀಫ್ ಡಾ. ಯೋಗೀಶ್ ಭಟ್, ಪಿ.ಆರ್.ಒ ಅವಿನಂದ್, ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ರಾವ್, ಆರೋಗ್ಯಾಧಿಕಾರಿ ಕಿಶೋರ್ ಕೊಟ್ಟಾರಿ, ತಾಲೂಕು ಆರೋಗ್ಯಧಿಕಾರಿ ಸುಜಯ್ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಬೆಂಗ್ರೆ, ಮಹಾಜನ ಸಭಾ ಉಪಾಧ್ಯಕ್ಷರಾದ ನರಸಿಂಹ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಹೇಮಚಂದ್ರ, ಕಸಬಾ ಬೆಂಗ್ರೆ ಮಸೀದಿಯ ಅಧ್ಯಕ್ಷರಾದ ಬಿಲಾಲ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು