5:27 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ತಲಪಾಡಿ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿ ಆತ್ಮಹತ್ಯೆ: ಕ್ರಮ ಕೈಗೊಳ್ಳಲು ಎನ್ ಎಸ್ ಯುಐ ಆಗ್ರಹ

12/06/2022, 23:08

ಮಂಗಳೂರು(reporterkarnataka.com): ತನ್ನ ತಾಯಿಯ ಜನ್ಮದಿನದಂದು ಶುಭ ಹಾರೈಸಲು ವಾರ್ಡನ್ ಮೊಬೈಲ್ ಫೋನ್ ನೀಡಲಿಲ್ಲ ಎಂದು ಆರೋಪಿಸಿ ತಲಪಾಡಿಯ ಶಾರದಾ ವಿದ್ಯಾನಿಕೇತನಾ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ  ಬೆಂಗಳೂರು ಮೂಲದ ಪೂರ್ವಜ್ (14) ಎಂಬ ಬಾಲಕನೊಬ್ಬ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾ ಸಂಸ್ಥೆಯ ಬೇಜವಾಬ್ದಾರಿತನಕ್ಕೆ ಎನ್ ಎಸ್ ಯುಐ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರದ ಯಾವುದೇ ರೀತಿಯ ಸೂಕ್ತ ಕ್ರಮಗೊಳ್ಳದಿರುವುದು ಖಂಡನೀಯ ಎಂದು ಎನ್ ಎಸ್ ಯುಐ ಹೇಳಿದೆ.

ಹಾಸ್ಟೆಲ್ ನಲ್ಲಿ ನಿಯಮಾವಳಿ ಪ್ರಕಾರ ವಾರ್ಡನ್ ಮೊಬೈಲ್ ನೀಡಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡಿದ್ದಾನೆ.

ತುರ್ತು ಅವಶ್ಯಕತೆಯಿರುವ ಸಂದರ್ಭದಲ್ಲಿ ವಾರ್ಡನ್ ವಿದ್ಯಾರ್ಥಿಗೆ ಪೋಷಕರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಬೇಕಿತ್ತು, ಇದರಿಂದ ಅಪ್ರಾಪ್ತ ವಯಸ್ಸಿನ ಬಾಲಕ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಇದಕ್ಕೆ ವಿದ್ಯಾಸಂಸ್ಥೆಯೇ ನೇರ ಹೊಣೆಯಾಗಿದ್ದು, ಆದ್ದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರವು ಖಾಸಗಿ ವಿದ್ಯಾಸಂಸ್ಥೆಗಳ ಕಟ್ಟುನಿಟ್ಟಾದ ನಿಯಮಗಳಿಗೆ ಬ್ರೇಕ್ ಹಾಕಬೇಕಾಗಿದೆ.

ಎನ್ ಎಸ್ ಯುಐ ಅಧ್ಯಕ್ಷ

ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣರಾದವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಸವಾದ್ ಸುಳ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು