7:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು