8:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ 

03/07/2022, 22:35

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಉಪನ್ಯಾಸಕ ಸತೀಶ್ ಪಿ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾಲೇಜಿನ ಪ್ರಾಂಶುಪಾಲ ಡಾ.ಸುಪ್ರಿಯಾನ್ ಮೊಂತೆರೋ ಮಾತನಾಡಿ, ಕಾಲೇಜಿಗೆ ಅನೇಕ ಕೊಡುಗೆ ಸತೀಶ್ ಪಿ. ನೀಡಿದ್ದಾರೆ. ಶಾಲಾ ಕಟ್ಟಡ ರಿಪೇರಿ ಕಾರ್ಯಕ್ರಮದಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶಿಕ್ಷಕಿ ಪ್ಲೇವಿ  ಮಾತನಾಡಿ, ಅವರು ಎಲ್ಲರಿಗೂ ಪ್ರಿಯವಾಗಿರುವ ಉತ್ತಮ ಶಿಕ್ಷಕ, ಜೀವನದ ಎಲ್ಲಾ ವಿಭಾಗಗಳಲ್ಲಿಯು ಸಕ್ಸಸ್ ಪಡೆದಿದ್ದಾರೆ ಎಂದು ನುಡಿದರು.

ಸತೀಶ್ ಪಿ. ಮಾತನಾಡಿ, ಬಡತನದಲ್ಲೇ ಬೆಳೆದರೂ ತಂದೆ  ತಾಯಿ ಶಿಕ್ಷಣಕ್ಕೆ ಯಾವತ್ತು ಅಡ್ಡಿಪಡಿಸಲಿಲ್ಲ. ನಾನು  ಶಿಕ್ಷಕ ನಾಗುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಕಲಿಬೇಕೆಂಬ ಛಲ ಇದ್ದರೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸತೀಶ್ ಪಿ. ದಂಪತಿಯನ್ನು ಸನ್ಮಾನಿಸಲಾಯಿತು.


ಉಪನ್ಯಾಸಕರುಗಳಾದ ಫಿಲೋಮಿನಾ ಲೋಬೊ, ಡಾ. ಶಿವಪ್ರಕಾಶ್, ಅಸುಂಡಿ, ದಿವಾಕರ್ ಶೆಟ್ಟಿ, ಚಂದ್ರಕಲಾ, ಆಶಾ, ಪ್ರಸನ್ನ, ಪ್ರಕಾಶ್ ಹಾಗೂ ಪುತ್ರ  ನಾಗಭೂಷಣ್ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಹಂಚಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು