5:38 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಕುರಿತು ರಾಜಣ್ಣ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸಲಿ: ಹೊರಟ್ಟಿ

04/07/2022, 08:54

ಬೆಂಗಳೂರು(reporterkarnataka.com): ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ ಎಚ್.ಡಿ.ದೇವೇಗೌಡರ ವಯಸ್ಸು ಹಾಗೂ ಶಕ್ತಿಯ ಕುರಿತು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಅಪಹಾಸ್ಯದ ಮಾತುಗಳು ಸಲ್ಲ, ಕೂಡಲೇ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೆಚ್.ಡಿ.ದೇವೇಗೌಡರು ಪ್ರಧಾನಿ ಹುದ್ದೆಗೆ ಏರಿದ ಏಕೈಕ ಕನ್ನಡಿಗರಾಗಿದ್ದಾರೆ. ಸುದೀರ್ಘ ಕಾಲದ ಅವರ ರಾಜಕೀಯ ಅನುಭವವನ್ನು ನಾಡು ಪಕ್ಷಾತೀತವಾಗಿ ಗೌರವಿಸಬೇಕು. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಹಿರಿಯರ ಕುರಿತು ಹೇಳಿಕೆ ನೀಡುವಾಗ ವೈಯಕ್ತಿಕ ಅಪಹಾಸ್ಯ, ಅಪನಿಂದೆಗಳಿಗೆ ಅವಕಾಶ ಕಲ್ಪಿಸಬಾರದು. ರಾಜಕಾರಣಿಗಳ ನಡೆಗಳು ನೈತಿಕತೆಯ ಎಲ್ಲೆ ಮೀರಬಾರದು. ಪ್ರತಿಯೊಂದು ಮಾತು, ಹೇಳಿಕೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂಬುದರ ಅರಿವು ಸದಾ ಕಾಲ ಜಾಗೃತವಾಗಿರಬೇಕು. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಎಚ್.ಡಿ.ದೇವೇಗೌಡರನ್ನು ಖುದ್ದಾಗಿ ಭೇಟಿಯಾಗಿ ಬಹಿರಂಗ ಕ್ಷಮೆಯಾಚಿಸಬೇಕು ಇಂತಹ ತಪ್ಪುಗಳಿಗೆ ಪ್ರಾಯಶ್ಚಿತ್ತ ಅನುಭವಿಸಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು