8:43 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

05/07/2022, 15:26

ಹುಬ್ಬಳ್ಳಿ (Reporterkarnataka.com)
ಹಾಡಹಗಲೇ ನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ್ರಾಮವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ಬೆಳಗ್ಗೆ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಕುಳಿತಿದ್ದರು. ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ಯುವಕರಿಬ್ಬರು ನಿಂತರು. ಗುರೂಜಿ ಅವರು ಖುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಇಬ್ಬರೂ ಸಮೀಪಕ್ಕೆ ಆಗಮಿಸಿದ್ದಾರೆ. ಒಬ್ಬ ಗುರೂಜಿ ಅವರ ಕಾಲು ಮುಟ್ಟಿ ನಮಸ್ಕರಿಸಿ ಮೇಲಕ್ಕೆ ಏಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಮತ್ತೊಬ್ಬ ಗುರೂಜಿಗೆ ಚಾಕುವಿನಿಂದ ಇರಿದಿದ್ದಾನೆ. ಏನಾಗ್ತಿದೆ ಎಂದು ಅರಿಯುವಷ್ಟರಲ್ಲಿ ಇಬ್ಬರೂ ಗುರೂಜಿಯನ್ನ ರಿಸೆಪ್ಶನ್​ನಲ್ಲೇ ಅಟ್ಟಾಡಿಸಿಕೊಂಡು 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಬಳಿಕ ಚಾಕು ಹಿಡಿದುಕೊಂಡೇ ಹೋಟೆಲ್​ನಿಂದ ಹೊರ ಓಡಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕೆಲವರು ಭಯದಿಂದ ದೂರ ಓಡಿದ್ದಾರೆ.

ಹೋಟೆಲ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಿಡಿಸಿಕೊಳ್ಳಲು ಬಂದರೂ ಅವರಿಗೂ ಬೆದರಿಸಿದ ಹಂತಕರು, ಸ್ಥಳದಲ್ಲೇ ಮೃತಪಡುವವರೆಗೂ ಗುರೂಜಿಗೆ ಚುಚ್ಚಿ ಚುಚ್ಚಿ ಕೊಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದ ಚಂದ್ರಶೇಖರ ಗುರೂಜಿ ಅವರು ಹುಬ್ಬಳ್ಳಿಯ ಉಣಕಲ್​ನ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಗುರೂಜಿ ಅವರನ್ನ ಭೇಟಿಯಾಗಲು ಬಂದಿದ್ದರು. ಅವರೇ ಗುರೂಜಿಯನ್ನ ಕೊಂದಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನವೊಂದು ಹಂತಕರ ಜಾಡು ಹಿಡಿದು ಹೊರಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು