9:09 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಸಿಎ ಪದವಿ ಪಡೆದ ಮಂಗಳೂರಿನ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು

20/07/2022, 21:36

ಮಂಗಳೂರು(reporterkarnataka.com):ಮೇ 2022ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಧನಂಜಯ್ ಶೇಟ್ ಹಾಗೂ ಗೌರವ ಭಟ್ ಅವರಿಗೆ   ಜುಲೈ  19, 2022 ರಂದು ಗೌರವಿಸಲಾಯಿತು.

“ನಾವು ಕೈಗೆತ್ತಿಕೊಂಡ ಕೆಲಸದಲ್ಲಿ ತೃಪ್ತಿ ಇರಬೇಕು, ಆತ್ಮವಿಶ್ವಾಸ , ನೈತಿಕತೆಯೊಂದಿಗೆ ಸಾಧನೆಯ ಹಾದಿಯಲ್ಲಿ ಬೆಂಬಲ ನೀಡಿದವರ ಸ್ಮರಣೆ ಸದಾ ಇದ್ದರೆ ಯಶಸ್ಸು ಖಚಿತ”  ಎಂದು ಕಾಲೇಜಿನ ಸಂಚಾಲಕ  ಸಿಎ ವಾಮನ್ ಕಾಮತ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.

ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲ್ ಕಾಮತ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಉಷಾ ನಾಯಕ್ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ರಿತಿಕಾ ದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸನ್ಮಾನ ಸಮಾರಂಭದಲ್ಲಿ ಕೆನರಾ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ  ಪುರುಷೋತ್ತಮ ಶೆಣ್ಯೆ, ಟಿ. ಗೋಪಾಲಕೃಷ್ಣ ಶೆಣ್ಯೆ, ಸುರೇಶ್ ಕಾಮತ್, ಡಾ. ಪ್ರೇಮಲತಾ ವಿ, ಪ್ರಾಂಶುಪಾಲರು ಕೆನರಾ ಕಾಲೇಜು ಹಾಗೂ ಸಾಧನೆಗೈದ ವಿದ್ಯಾರ್ಥಿಗಳ ಹೆತ್ತವರೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು