9:09 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಬಾಹ್ಯಾಕಾಶಕ್ಕೆ ಜಿಗಿಯಲಿದೆ ವಿದ್ಯಾರ್ಥಿನಿಯರು ತಯಾರಿಸಿದ ಪುಟ್ಟ ಸ್ಯಾಟಲೈಟ್..!: ಇದರ ತೂಕ ಎಷ್ಟು ಗೊತ್ತೇ?

31/07/2022, 18:39

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪ್ರಪ್ರಥಮ ಬಾರಿಗೆ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಸೇರಿಕೊಂಡು ತಯಾರಿಸಿದ ಪುಟ್ಟ ಉಪಗ್ರಹವೊಂದು ಬಾಹ್ಯಾಕಾಶಕ್ಕೆ ಜಿಗಿಯಲು ಸಿದ್ಧತೆ ನಡೆಸಿದೆ. ದೇಶದ 75 ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ ಪುಟಾಣಿ ಉಪಗ್ರಹ ಇದಾಗಿದೆ.

ಈ ಉಪಗ್ರಹವು ಕೇವಲ 8 ಕೆ.ಜಿ ತೂಕ ಹೊಂದಿದ್ದು, ತನ್ನದೇ ಸೌರ ಫಲಕ, ದೀರ್ಘ ವ್ಯಾಪ್ತಿಯ ಸಂವಹನ ಸಲಕರೆಣೆ, ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೀವಿತಾವಧಿ ಮಾತ್ರ 6 ತಿಂಗಳುಗಳಾಗಿವೆ.

ವಿಶ್ವಸಂಸ್ಥೆಯ ’ಬಾಹ್ಯಾಕಾಶದಲ್ಲಿ ಮಹಿಳೆಯರು’ ಎಂಬ ವಿಷಯದ ಆಧಾರದಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಉಪಗ್ರಹ ನಿರ್ಮಾಣವಾಗಿದೆ ಎಂದು ಮುಖ್ಯ ತಂತ್ರಜ್ಞಾನ ಅಧಿಕಾರಿ ರಿಫಾತ್ ಶಾರೂಕ್ ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ಈ ಉಪಗ್ರಹವು ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋನ ಸಣ್ಣ ಉಪಗ್ರಹ ಉಡಾವಣೆ ನೌಕೆ ಎಸ್‌ಎಸ್‌ಎಲ್‌ವಿ ಮೂಲಕ ಉಡಾವಣೆಯಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು