3:26 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಲಿಂಗಸುಗೂರು ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಕೋಟಿ ಅನುದಾನ: ಶಾಸಕ  ಹುಲಿಗೇರಿ ಸಚಿವ ಶ್ರೀರಾಮುಲುಗೆ

23/06/2021, 08:05

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಲಿಂಗಸುಗೂರಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ‌.ಆರ್. ಅಂಬೇಡ್ಕರ್ ಅವರ ಸಾಂಸ್ಕೃತಿಕ ಭವನ ನಿರ್ಮಾಣ ವೆಚ್ಚವನ್ನು ಹೆಚ್ಚಿಸಲು ಶಾಸಕ ಡಿ.ಎಸ್. ಹುಲಿಗೇರಿ ಅವರು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಶಿಫಾರಸು ಮಾಡಿದ್ದಾರೆ.

ಲಿಂಗಸುಗೂರು ನಗರದ ಅಂಬೇಡ್ಕರ್ ಸಾಂಸ್ಕೃತಿಕ ಭವನಕ್ಕಾಗಿ ಸುಮಾರು 8,9 ವರ್ಷಗಳ ಹಿಂದೆ ಜಾಗ ಮೀಸಲಾಗಿಸಿಕೊಂಡು ಕಟ್ಟಡ ನಿರ್ಮಾಣಕ್ಕಾಗಿ 50 ಲಕ್ಷ ರೂಪಾಯಿಗಳನ್ನು ಸರಕಾರ ಮಂಜೂರು ಮಾಡಿತ್ತು. ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡುವುದಕ್ಕಾಗಿ 50 ಲಕ್ಷ ರೂಪಾಯಿಗಳು ಸಾಕಾಗುವುದಿಲ್ಲ. ಈ ಭವನದ ನಿರ್ಮಾಣದ ಅಳತೆ 800 ಚದರ ಅಡಿ ಆಗಿದ್ದು ಇದಕ್ಕೆ ಕೇವಲ ಐವತ್ತು ಲಕ್ಷ ರೂಪಾಯಿಗಳನ್ನು ಸರಕಾರ ಮಂಜೂರು ಮಾಡಿದ್ದು ಇದರಲ್ಲಿ ಸುಸಜ್ಜಿತವಾದ ಭವನ ನಿರ್ಮಾಣ ಮಾಡಲಿಕ್ಕೆ ಆಗುವುದಿಲ್ಲ ಎಂದು ಶಾಸಕರು ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ತಿಳಿಸಿದ್ದಾರೆ.

ಸರಕಾರ ಮಂಜೂರು ಮಾಡಿದಂಥ 50 ಲಕ್ಷ ರೂಪಾಯಿಗಳು ಯಾವುದಕ್ಕೂ ಸಾಲುವುದಿಲ್ಲ, ಇದರಿಂದ ಕೇವಲ ಬುನಿಯಾದಿ, ಬೇಸ್ಮೆಂಟ್ ಗೂ , ಹಾಗೂ ಕಟ್ಟಡ ಕಟ್ಟಲು ಕೂಲಿಗೂ ಸಾಧ್ಯವಿಲ್ಲದಂತೆ ಯಾಗುತ್ತದೆ. ಇದರಲ್ಲಿ ಭವನ ಎಲ್ಲಿಂದ ನಿರ್ಮಾಣ ಮಾಡಲು ಸಾಧ್ಯ,? ಸರಕಾರವು ಬೇರೆ ಬೇರೆ ಕೆಲಸಗಳಿಗೆ ನೂರಾರು ಕೋಟಿ ಹಣವನ್ನು ಖರ್ಚು ಮಾಡುತ್ತದೆ. ಆದರೆ ಮೀಸಲಾತಿ ಕ್ಷೇತ್ರವಾದ ಲಿಂಗಸುಗೂರು ಅಂಬೇಡ್ಕರ್ ರವರ ಭವನಕ್ಕೆ ಮಲತಾಯಿ ಧೋರಣೆಯನ್ನು ತೋರುತ್ತಿದೆ.ಮಠಗಳಿಗೆ ಹಾಗೂ ಮಹಾನ್ ವ್ಯಕ್ತಿಗಳ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು, ಕೋಟ್ಯಾನು ಗಟ್ಟಲೆ ಹಣವನ್ನು ಮಂಜೂರು ಮಾಡಿರುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ನೂರಾರು ಕೋಟಿ ಗಟ್ಟಲೆ ಹಣವನ್ನು ನೀರಾವರಿ ಇಲಾಖೆಗೆ ಮತ್ತು ಇನ್ನು ಕೆಲವು ಇಲಾಖೆಗಳಿಗೆ ಕೋಟಿ ಕೋಟಿ ಹಣವನ್ನು ಈಗಲೂ ಬಿಡುಗಡೆ ಮಾಡಿರುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಇದು ಮೀಸಲು ಕ್ಷೇತ್ರವಾದರೂ ಇತ್ತಕಡೆ ಗಮನವನ್ನು ಹರಿಸುತ್ತಿಲ್ಲ. ಇದಕ್ಕಾಗಿ ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್, ಜೆಡಿ.ಎಸ್ ಮುಖಂಡರಾದ ಸಿದ್ದು ಬಂಡಿ, ಹಾಗೂ ಹಾಲಿ ಶಾಸಕರು ಹಾಗೂ ಇನ್ನಿತರರು ಈ ಕ್ಷೇತ್ರಕ್ಕೆ ಮೀಸಲಾಗಿರುತ್ತಾರೆ. ಹಾಗೂ ಇನ್ನಿತರ ಸಂಘ ಸಂಸ್ಥೆಗಳು  ಈ ಸರಕಾರಕ್ಕೆ ಒತ್ತಾಯ ಮಾಡಿ ಸುಮಾರು 2ಕೋಟಿ ಯಷ್ಟು ಅನುದಾನ ವಾಗುವಂತೆ ಹಾಗು ಸುಸಜ್ಜಿತವಾದ ಸಾಂಸ್ಕೃತಿಕ ಭವನದ ಕಟ್ಟಡವನ್ನು ನಿರ್ಮಾಣ ಮಾಡಲು ಸಾಧ್ಯವಾಗುವಂತೆ ಪ್ರೇರೇಪಿಸಬೇಕು ಎಂದಿದ್ದಾರೆ.

ದಲಿತ ಯುವ ಮುಖಂಡ ಮೋಹನ್  ಗೋಸ್ಲೆ ಅವರು ಎಲ್ಲರೂ ಪಕ್ಷಬೇಧ ಮರೆತು ಒಗ್ಗಟ್ಟಾಗಿ ಡಾ ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಶ್ರಮಿಸಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು