8:00 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಯೊಳಗೆ ಕೋಸ್ಟಲ್ ವುಡ್ ನಟ ರೂಪೇಶ್ ಶೆಟ್ಟಿ ಎಂಟ್ರಿ!: ಕರಾವಳಿಯಲ್ಲಿ ಹೊಸ ಕಲರವ!

06/08/2022, 21:05

ಮಂಗಳೂರು(reporterkarnataka.com): ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಷೋ ಬಿಗ್‌ಬಾಸ್ ಓಟಿಟಿ ಸೀಸನ್-1 ಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದ್ದು, ಕೋಸ್ಟಲ್ ವುಡ್ ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗೂರೂಜಿ, ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆ ಸೇರಿದ್ದಾರೆ. ಕರಾವಳಿಯಿಂದ ನಟ, ನಿರೂಪಕ ರೂಪೇಶ್ ಶೆಟ್ಟಿ ಕೂಡ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.

ತುಳು ನಿರೂಪಕನಾಗಿ ಕರಾವಳಿ ತುಂಬಾ ಜನಪ್ರಿಯತೆ ಪಡೆದಿದ್ದ ರೂಪೇಶ್ ಅವರು ನಂತರ ತುಳು ಚಿತ್ರರಂಗದ ಮೂಲಕ ಬೆಳ್ಳಿಪರದೆಗೆ ಪಾದರ್ಪಣೆ ಮಾಡಿದ್ದರು. ಇಂದು ರೂಪೇಶ್ ಶೆಟ್ಟಿ ಅವರು ಕರಾವಳಿ ಮಾತ್ರವಲ್ಲ ಕರ್ನಾಟಕದಾದ್ಯಂತ ಚಿರಪರಿಚಿತರು.ನಿಶ್ಯಬ್ದ-2, ಡೇಂಜರ್ ಝೇನ್, ಪಿಶಾಚಿ-2 ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

2018ರಲ್ಲಿ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ ‘ಅಮ್ಮರ್ ಪೊಲೀಸಾ’, ಇತ್ತೀಚೆಗೆ ಬಿಡುಗಡೆಯಾದ ಗಿರ್‌ಗಿಟ್ ಸಿನಿಮಾ ಹಿಟ್ ಆಗಿ ಹೆಸರು ತಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು