8:58 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅಝದಿ ಕಿ ಅಮೃತ ಮಹೋತ್ಸವ: ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

10/08/2022, 21:56

ಮಂಗಳೂರು(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಸಂಘ,ವಿಭಾಗದ ವತಿಯಿಂದ ಅಝದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ರವೀಂದ್ರ ಕಲಾಭವನದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಾ ವಿಶ್ವ ವಿದ್ಯಾ ನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಶಾಮ್ ಭಟ್ ಅವರು ಮಾತನಾಡಿ, ಕರಾವಳಿಯ ಸ್ಥಳೀಯ  ಹೋರಾಟಗಾರರು ಸ್ವಾತಂತ್ರ್ಯದ ಜೊತೆಗೆ ಅಸ್ಪ್ರಶ್ಯತೆಯ ನಿವಾರಣೆಗೆ ನೀಡಿದಂತಹ ಕೊಡುಗೆ, ಉಪ್ಪಿನ ಸತ್ಯಾಗ್ರಹದಲ್ಲಿ ಸ್ಥಳೀಯರು ತೊಡಗಿಸಿಕೊಂಡ  ರೀತಿ ವಿಶೇಷವಾದದ್ದು. ತಮ್ಮ ಪ್ರೀತಿಯ ಚಿನ್ನಾಭರಣಗಳನ್ನು ನೀಡಿ ಸ್ವಾತಂತ್ರ್ಯದ ಚಳುವಳಿಗೆ ಸಹಕಾರ ನೀಡಿದ ಮಹಿಳೆಯರ ತ್ಯಾಗ ಅತ್ಯಮೂಲ್ಯವಾದದು. ಅದರಂತೆ ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಅವರು ಕರೆ ನೀಡಿದರು.



ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರೊ.ಕೆ.ಎಂ ಲೋಕೇಶ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ನಡೆದ ಬಲಿದಾನದ ಜತೆಗೆ ಸ್ವಾತಂತ್ರ್ಯ ನಂತರ ದಿನಗಳಲ್ಲಿ ನಡೆದ ವಿದ್ಯಮಾನಗಳಿಂದ  ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಉಳಿಸಿಕೊಟ್ಟ ಯೋಧರ ಬಲಿದಾನವನ್ನು ಗೌರವಿಸಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.
.ಪಿ. ಸುಬ್ರಮಣ್ಯ ಯಡಪಡಿತ್ತಾಯ ವಹಿಸಿದ್ದರು.
ಅವರು ಮಾತನಾಡಿ, ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ನಾವು ನೆನಪಿಸಿಕೊಳ್ಳಬೇಕು.
ಸ್ವಾತಂತ್ರ್ಯ ಸಿಕ್ಕಿದೆ ಎಂದು ಉದಾಸೀನತೆ ತೋರದೆ ಅದನ್ನು ಕಾಪಾಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ನಾವು ಅಸಡ್ಡೆ ತೋರಿದರೆ ಇನ್ನು ಮುಂದಿನ 25 ವರ್ಷಗಳಲ್ಲಿ ಕಷ್ಟದ ಸಂದರ್ಭಗಳನ್ನು ನಾವು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿಜಿ ಅವರ ಹರ್ಗರ್ ತಿರಂಗ ಎನ್ನುವ ನಿಟ್ಟಿನಲ್ಲಿ ಮನೆ ಮನೆಯಲ್ಲಿ ಸ್ವಾತಂತ್ರ್ಯದ ಹೋರಾಟಗಾರರನ್ನು ನೆನೆಸಿಕೊಳ್ಳುವ ಉದ್ದೇಶದಿಂದ, ದೇಶಪ್ರೇಮವನ್ನು ಸಾರುವ  ಸಂಕೇತವಾಗಿ ತಿರಂಗ ಆರಿಸಿ ಎಂದು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ, ಕಾರ್ಯಾಗಾರದ ಸಂಯೋಜಕ ಡಾ.ಜಯರಾಜ್ ಎನ್., ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್, ಹಿಂದಿ ವಿಭಾಗದ ಮುಖ್ಯಸ್ಥೆ ಸುಮನ ಟಿ. ರೋಡನ್ನವರ್, ಸೋಶಿಯಾಲಜಿ ವಿಭಾಗದ ಮುಖ್ಯಸ್ಥೆ ಗಾಯತ್ರಿ ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು