8:00 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

‘ವಾಯ್ಸ್ ಆಫ್ ಆರಾಧನಾ’:  ಜುಲೈ ತಿಂಗಳ ಟಾಪರ್ ಆಗಿ ದೀಕ್ಷಾ ಎ.ಜೆ. ಹಾಗೂ ಶ್ರದ್ಧಾ ಎಂ.ಪಿ. ಆಯ್ಕೆ

10/08/2022, 22:19

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ದೀಕ್ಷಾ ಎ.ಜೆ. ಹಾಗೂ ಶ್ರದ್ಧಾ ಎಂ.ಪಿ. ಆಯ್ಕೆಗೊಂಡಿದ್ದಾರೆ.

ದೀಕ್ಷಾ, ಕಾಸರಗೋಡು ಜಿಲ್ಲೆಯ ಬೋವಿಕ್ಕಾನದ ಅಶ್ವಥ್ ಕುಮಾರ್ ಹಾಗೂ ಆಶಾ ದಂಪತಿ ಪ್ರಥಮ ಪುತ್ರಿ. ಈಕೆ ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಸರಸ್ವತಿ ವಿದ್ಯಾಲಯ ಬೋವಿಕ್ಕಾನದಲ್ಲಿ ಕಲಿತು ಐದನೇ ತರಗತಿಯಿಂದ ಕಾಸರಗೋಡಿನ  ಬಿಇಎಂಎಚ್ ಎಸ್ ಎಸ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.


ಈಕೆ ಭರತನಾಟ್ಯ, ಜಾನಪದ ನೃತ್ಯವನ್ನು ಗುರುಗಳಾದ ಗಿರೀಜ ಪಂಡಿತ್ 
ಕಾಸರಗೋಡು ಅವರೊಂದು ನಾಟ್ಯತರಂಗಿಣಿ ಯಲ್ಲಿ 8 ವರ್ಷಗಳಿಂದ ಕಲಿಯುತ್ತಿದ್ದಾಳೆ.

ಕೊರೋನಾ ಮಹಾಮಾರಿಯಿಂದ  ನೃತ್ಯ ತರಬೇತಿಯನ್ನು ನಿಲಿಸಬೇಕ್ಕಾಗಿ ಬಂತು. ಇವಳ ರಂಗಪ್ರವೇಶವು ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಶಾಲಾ ಕಲೋತ್ಸವ ಜಿಲ್ಲಾ ಕಲೋತ್ಸವ, ಸಬ್ ಜಿಲ್ಲಾ ಕಲೋತ್ಸವದಲ್ಲಿ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ A ಗ್ರೇಡ್ ಹಾಗೂ ಗ್ರೂಪ್ ಡ್ಯಾನ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. 50ಕ್ಕಿಂತ ಹೆಚ್ಚಿನ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ಮಾಡಿದ್ದಾಳೆ.

ಸ್ಪಂದನ ಟಿವಿಯಲ್ಲಿ ಮೂರು ಬಾರಿ ನೃತ್ಯ ಪ್ರದರ್ಶನ ನೀಡಿದ್ದಾಳೆ. ವಾಯ್ಸ್ ಆಫ್ ಆರಾಧನ ದಲ್ಲಿ ಎರಡು ಬಾರಿ ವಿಜೇತಳಾಗಿದ್ದಾಳೆ.

ಶ್ರದ್ಧಾ ಎಂ.ಪಿ.  8ನೇ ತರಗತಿ ವಿದ್ಯಾರ್ಥಿನಿ. ಈಕೆಗೆ ಡ್ಯಾನ್ಸ್, ಯಕ್ಷಗಾನ. ಅಭಿನಯ ಅಂದರೆ ತುಂಬಾನೇ ಇಷ್ಟ. ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಇದ್ದರೆ ನಾನು ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಿಸುತ್ತೇನೆ. ನನ್ನ ಮೊದಲನೆಯ ಡ್ಯಾನ್ಸ್ ಜರ್ನಿ ನನ್ನ ಅಮ್ಮನಿಂದಲೇ ಶುರುವಾಯಿತು. ನನ್ನ ಟ್ಯಾಲೆಂಟ್ ಅನ್ನು ಹೊರ ತರಲು ಒಂದು ಒಳ್ಳೆ ವೇದಿಕೆ ನನಗೆ ಸಿಗಲು ತೊಡಗಿತು. ಅದರಲ್ಲಿ ಮುಖ್ಯವಾಗಿ ನನಗೆ ಥ್ಯಾಂಕ್ಸ್ ಹೇಳಬೇಕಂದ್ರೆ ವಾಯ್ಸ್ ಆಫ್ ಆರಾಧನಾ 

ತಂಡಕ್ಕೆ. ಯಾಕೆಂದರೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿದ್ದೇನೆ.

ಸ್ಪಂದನ ಟಿವಿಯಲ್ಲಿ ಕೂಡ ನನಗೆ ಒಳ್ಳೆಯ ವೇದಿಕೆಯನ್ನು ಒದಗಿಸಿ ಕೊಟ್ಟಿದ್ದಾರೆ. ನೃತ್ಯದಿಂದಲೇ ನನ್ನ ಜರ್ನಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡು ಹೋಗಬೇಕೆಂದು ನನ್ನಾಸೆ.

ಇತ್ತೀಚಿನ ಸುದ್ದಿ

ಜಾಹೀರಾತು