8:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು